ಬೀದರ್: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಆರ್ಎಸ್ಎಸ್ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಬೀದರ್ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಕ್ಫ್ ಮಂಡಳಿ ಪ್ರತಿಭಟನೆ ವೇಳೆ ನಾವೆಲ್ಲರೂ ಹೋರಾಟಕ್ಕೆ ಹೆದರಿ ಹೋರಾಟ ಮಾಡದಿದ್ದರೆ, ಬಸವಣ್ಣನವರ ರೀತಿ ಹೊಳೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂಬ ಹೇಳಿಕೆ ನೀಚ ಕೆಲಸದಂತಿದೆ. ವಿನಾಶಕಾಲ ವಿಪರೀತ ಬುದ್ಧಿ ಎಂಬ ಗಾದೆಯಂತೆ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅದರ ಫಲವನ್ನು ಬಸವಣ್ಣನವರ ಭಕ್ತರು ನೀಡುತ್ತಾರೆ ಎಂದು ಹೇಳಿದ್ದಾರೆ.
ಯತ್ನಾಳ್ ವೈಯಕ್ತಿಕ ಸ್ವಾರ್ಥ ಮತ್ತು ಪಕ್ಷದ ಆಂತರಿಕ ಕಲಹಗಳ ಸ್ವಾರ್ಥಕ್ಕಾಗಿ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ನಾಟಕಗೊತ್ತಿರುವ ಬಿಜೆಪಿ ನಾಯಕರು ಸುಮ್ಮನಿದ್ದು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ ಪ್ರತಿಕ್ರಿಯೆ ನೀಡುತ್ತಿಲ್ಲ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಬಸವ ಭಕ್ತರ ಹತ್ತಿರ ಮತ ಕೇಳುವ ಬಿಜೆಪಿಯವರು ಇಂದು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯತ್ನಾಳ್ ಜೋಕರ್ ಅಷ್ಟೇ ಅಲ್ಲ, ಮಾನಸಿಕ ರೋಗಿಯೂ ಹೌದು. ಹೀಗಾಗಿ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ. ಯತ್ನಾಳ್ ಹೇಳಿಕೆಯಿಂದ ಬಸವ ಭಕ್ತರಿಗೆ ನೋವು ಉಂಟಾಗಿದ್ದು, ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…