ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್ಡಿಆರ್ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.
ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕವು 123 ವರ್ಷಗಳಲ್ಲಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಮತ್ತು ಬೆಳೆ ಹಾನಿ ಅಂದಾಜು 35,162 ಕೋಟಿ ರೂ.ಆಗಿದೆ. ಬೆಳೆಗಳಿಗೆ ಹಾನಿಯು 40-90 ರಷ್ಟಾಗಿದೆ.
ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಎನ್ಡಿಆರ್ಎಫ್ನಿಂದ 18,171 ಕೋಟಿ ರೂ.ಗಳನ್ನು ಕೋರಿದೆ ಎಂದು ಖರ್ಗೆ ಹೇಳಿದರು.
ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು ಎಂದು ಅವರು ತಿಳಿಸಿದರು.
ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…