ರಾಜ್ಯ

ಕಾಂಗ್ರೆಸ್‌ ಅವಧಿಯಲ್ಲಿ ನಟಿ ರನ್ಯಾರಾವ್‌ಗೆ ಕೈಗಾರಿಕಾ ಜಮೀನು ಮಂಜೂರು ಆಗಿಲ್ಲ: ಕೆಐಎಡಿಇ ಸ್ಪಷ್ಟನೆ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿ ನಟಿ ರನ್ಯಾರಾವ್‌ ಅವರಿಗೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂಬ ವರದಿ ಬೆನ್ನಲ್ಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಪಷ್ಟನೆ ನೀಡಿದೆ.

ನಟಿ ರನ್ಯಾರಾವ್‌ ಅವರಿಗೆ 023ರ ಜನವರಿ 2ರಂದು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಕ್ಷೀರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ 12 ಎಕರೆ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಮೊದಲೇ ಜಮೀನು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಮಹೇಶ್‌ ಹೇಳಿದ್ದಾರೆ.

ಭೂ ಹಂಚಿಕೆಯನ್ನು 137 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮತಿ ಸಮಿತಿ ಅನುಮೋದಿಸಿದ್ದು, ಸಾಧಕ-ಬಾಧಕಗಳನ್ನು ಚರ್ಚಿಸಿ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಟಿ ರನ್ಯರಾವ್ ಅವರ ಕಂಪನಿಯು ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಹಾಗೂ ಸಂಬಂಧಿತ ಉತ್ಪನ್ನಗಳ ಉತ್ಪಾದನಾ ಘಟಕವನ್ನು 138 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಆ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದಿಂದ 2 ವರ್ಷಗಳ ಅವಧಿಯವರೆಗೂ ಒಪ್ಪಂದ ಮಾಡಿಕೊಂಡು ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವ ಕಾರಣ ರನ್ಯಾ ರಾವ್‌ ಒಡೆತನದ 12 ಎಕರೆ ಭೂಮಿಯನ್ನು ಕೆಐಎಡಿಬಿ ವಾಪಸ್‌ ಪಡೆಯಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

22 mins ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

51 mins ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

2 hours ago

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

3 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

4 hours ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

4 hours ago