ರಾಜ್ಯ

ಕಾಂಗ್ರೆಸ್‌ ಅವಧಿಯಲ್ಲಿ ನಟಿ ರನ್ಯಾರಾವ್‌ಗೆ ಕೈಗಾರಿಕಾ ಜಮೀನು ಮಂಜೂರು ಆಗಿಲ್ಲ: ಕೆಐಎಡಿಇ ಸ್ಪಷ್ಟನೆ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿ ನಟಿ ರನ್ಯಾರಾವ್‌ ಅವರಿಗೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂಬ ವರದಿ ಬೆನ್ನಲ್ಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಪಷ್ಟನೆ ನೀಡಿದೆ.

ನಟಿ ರನ್ಯಾರಾವ್‌ ಅವರಿಗೆ 023ರ ಜನವರಿ 2ರಂದು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಕ್ಷೀರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ 12 ಎಕರೆ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಮೊದಲೇ ಜಮೀನು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಮಹೇಶ್‌ ಹೇಳಿದ್ದಾರೆ.

ಭೂ ಹಂಚಿಕೆಯನ್ನು 137 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮತಿ ಸಮಿತಿ ಅನುಮೋದಿಸಿದ್ದು, ಸಾಧಕ-ಬಾಧಕಗಳನ್ನು ಚರ್ಚಿಸಿ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಟಿ ರನ್ಯರಾವ್ ಅವರ ಕಂಪನಿಯು ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಹಾಗೂ ಸಂಬಂಧಿತ ಉತ್ಪನ್ನಗಳ ಉತ್ಪಾದನಾ ಘಟಕವನ್ನು 138 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಆ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದಿಂದ 2 ವರ್ಷಗಳ ಅವಧಿಯವರೆಗೂ ಒಪ್ಪಂದ ಮಾಡಿಕೊಂಡು ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವ ಕಾರಣ ರನ್ಯಾ ರಾವ್‌ ಒಡೆತನದ 12 ಎಕರೆ ಭೂಮಿಯನ್ನು ಕೆಐಎಡಿಬಿ ವಾಪಸ್‌ ಪಡೆಯಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago