ರಾಜ್ಯ

ಕಾಂಗ್ರೆಸ್‌ ಅವಧಿಯಲ್ಲಿ ನಟಿ ರನ್ಯಾರಾವ್‌ಗೆ ಕೈಗಾರಿಕಾ ಜಮೀನು ಮಂಜೂರು ಆಗಿಲ್ಲ: ಕೆಐಎಡಿಇ ಸ್ಪಷ್ಟನೆ

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿ ನಟಿ ರನ್ಯಾರಾವ್‌ ಅವರಿಗೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂಬ ವರದಿ ಬೆನ್ನಲ್ಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಪಷ್ಟನೆ ನೀಡಿದೆ.

ನಟಿ ರನ್ಯಾರಾವ್‌ ಅವರಿಗೆ 023ರ ಜನವರಿ 2ರಂದು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಕ್ಷೀರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ 12 ಎಕರೆ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಮೊದಲೇ ಜಮೀನು ಮಂಜೂರಾಗಿದೆ ಎಂದು ಕೆಐಎಡಿಬಿ ಸಿಇಒ ಮಹೇಶ್‌ ಹೇಳಿದ್ದಾರೆ.

ಭೂ ಹಂಚಿಕೆಯನ್ನು 137 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮತಿ ಸಮಿತಿ ಅನುಮೋದಿಸಿದ್ದು, ಸಾಧಕ-ಬಾಧಕಗಳನ್ನು ಚರ್ಚಿಸಿ ಜಮೀನು ಅನ್ನು ಮಂಜೂರು ಮಾಡಲಾಗಿದೆ. ಅಲ್ಲದೇ ನಟಿ ರನ್ಯರಾವ್ ಅವರ ಕಂಪನಿಯು ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಹಾಗೂ ಸಂಬಂಧಿತ ಉತ್ಪನ್ನಗಳ ಉತ್ಪಾದನಾ ಘಟಕವನ್ನು 138 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ, ಆ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದಿಂದ 2 ವರ್ಷಗಳ ಅವಧಿಯವರೆಗೂ ಒಪ್ಪಂದ ಮಾಡಿಕೊಂಡು ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಆ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವ ಕಾರಣ ರನ್ಯಾ ರಾವ್‌ ಒಡೆತನದ 12 ಎಕರೆ ಭೂಮಿಯನ್ನು ಕೆಐಎಡಿಬಿ ವಾಪಸ್‌ ಪಡೆಯಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

3 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

3 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

3 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

3 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

3 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

3 hours ago