ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಕೆಂಗೇರಿಯ ಕೋಣಸಂದ್ರ ನಿವಾಸಿ ದಿವ್ಯ (36) ಕೊಲೆಯಾದವರು. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯ ನಡುವೆ ಕೃತ್ಯ ನಡೆದಿದೆ ಎನ್ನಲಾಗಿದೆ. ಮೃತಳ ಪತಿ ಗುರುಮೂರ್ತಿ ಶುಕ್ರವಾರ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೃತ್ಯ ನಡೆದಿರುವುದು ಗೊತ್ತಾಗಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಿವ್ಯಾ ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ದುರ್ಷರ್ಮಿಯು ಮನೆಯಲ್ಲಿ ದಿವ್ಯಾ ಒಬ್ಬಳೇ ಇರುವುದರ ಬಗ್ಗೆ ತಿಳಿದುಕೊಂಡು ಕೃತ್ಯ ಎಸಗಿರುವ ಸಾಧ್ಯತೆಯಿದೆ. ಕೊಲೆ ಬಳಿಕೆ ದುಷ್ಕರ್ಮಿಯು ದಿವ್ಯಾ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸಹಿತ ಪರಾರಿಯಾಗಿದ್ದಾನೆ.
ದುರ್ಷರ್ಮಿಯು ಕಳ್ಳತನಕ್ಕೆ ಬಂದು ಕೊಲೆ ಮಾಡಿದನೇ ಅಥವಾ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯ ಬಳಿಕ ತಿಳಿಯಲಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ದುರ್ಷರ್ಮಿಯ ಪತ್ತೆಗೆ ತೀವ್ರ ಶೋಭ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿಗೆ ಎರಡು ವರ್ಷದ ಮಗು ಇದ್ದು, ಕೃತ್ಯ ನಡೆದಾಗ ಹಾಗೂ ಪತಿ ಬಂದು ನೋಡಿದಾಗಲು ಮಗು ಮಲಗಿತ್ತು ಎನ್ನಲಾಗಿದೆ. ಗುರುಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಪತ್ನಿ ದಿವ್ಯ ಮಗು ನೋಡಿಕೊಂಡು ಮನೆಯಲ್ಲಿಯೇ ಇರುತ್ತಿದ್ದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…