ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಕೆಂಗೇರಿಯ ಕೋಣಸಂದ್ರ ನಿವಾಸಿ ದಿವ್ಯ (36) ಕೊಲೆಯಾದವರು. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯ ನಡುವೆ ಕೃತ್ಯ ನಡೆದಿದೆ ಎನ್ನಲಾಗಿದೆ. ಮೃತಳ ಪತಿ ಗುರುಮೂರ್ತಿ ಶುಕ್ರವಾರ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೃತ್ಯ ನಡೆದಿರುವುದು ಗೊತ್ತಾಗಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಿವ್ಯಾ ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ದುರ್ಷರ್ಮಿಯು ಮನೆಯಲ್ಲಿ ದಿವ್ಯಾ ಒಬ್ಬಳೇ ಇರುವುದರ ಬಗ್ಗೆ ತಿಳಿದುಕೊಂಡು ಕೃತ್ಯ ಎಸಗಿರುವ ಸಾಧ್ಯತೆಯಿದೆ. ಕೊಲೆ ಬಳಿಕೆ ದುಷ್ಕರ್ಮಿಯು ದಿವ್ಯಾ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸಹಿತ ಪರಾರಿಯಾಗಿದ್ದಾನೆ.
ದುರ್ಷರ್ಮಿಯು ಕಳ್ಳತನಕ್ಕೆ ಬಂದು ಕೊಲೆ ಮಾಡಿದನೇ ಅಥವಾ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯ ಬಳಿಕ ತಿಳಿಯಲಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ದುರ್ಷರ್ಮಿಯ ಪತ್ತೆಗೆ ತೀವ್ರ ಶೋಭ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿಗೆ ಎರಡು ವರ್ಷದ ಮಗು ಇದ್ದು, ಕೃತ್ಯ ನಡೆದಾಗ ಹಾಗೂ ಪತಿ ಬಂದು ನೋಡಿದಾಗಲು ಮಗು ಮಲಗಿತ್ತು ಎನ್ನಲಾಗಿದೆ. ಗುರುಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಪತ್ನಿ ದಿವ್ಯ ಮಗು ನೋಡಿಕೊಂಡು ಮನೆಯಲ್ಲಿಯೇ ಇರುತ್ತಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…