ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು.
ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಖರ್ಗೆ ಸಬೂಬು ಹೇಳುವುದು ಬಿಡಬೇಕು
ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎಲ್ ಓಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.
ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಿಮ್ಮಲ್ಲಿ ಒಡಕು ಬರಬೇಕು ಎಂದು ಸರಕಾರ ಬಯಸುತ್ತದೆ. ಇದನ್ನು ನೀವು ಅರ್ಥ ಮಾಡಿಕೊಳ್ಳಿ. ಒಂದು ವರ್ಷ ಯಾರು ಕೆಲಸ ಮಾಡಬೇಡಿ. ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಬರಲಿ, ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಕೇಳುತ್ತಿರುವುದು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.
ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ
ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು ಕೇಂದ್ರ ಸಚಿವರು.
ನಿನಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ. ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ. ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದು ಸಚಿವರು ಹೇಳಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…