ರಾಜ್ಯ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಎಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು.

ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಖರ್ಗೆ ಸಬೂಬು ಹೇಳುವುದು ಬಿಡಬೇಕು
ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎಲ್ ಓಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಿಮ್ಮಲ್ಲಿ ಒಡಕು ಬರಬೇಕು ಎಂದು ಸರಕಾರ ಬಯಸುತ್ತದೆ. ಇದನ್ನು ನೀವು ಅರ್ಥ ಮಾಡಿಕೊಳ್ಳಿ. ಒಂದು ವರ್ಷ ಯಾರು ಕೆಲಸ ಮಾಡಬೇಡಿ. ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಬರಲಿ, ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಕೇಳುತ್ತಿರುವುದು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ
ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು ಕೇಂದ್ರ ಸಚಿವರು.

ನಿನಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ. ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ. ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

8 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

24 hours ago