ರಾಜ್ಯ

ಕಿರಣ್ ಮುಜುಂದಾರ್ ಟೀಕೆ ನಿರರ್ಥಕ : ಎಚ್‌ಡಿಕೆ

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ಇದನ್ನು ಓದಿ: ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.

ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

8 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

9 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago