ರಾಜ್ಯ

ಕಿರಣ್ ಮುಜುಂದಾರ್ ಟೀಕೆ ನಿರರ್ಥಕ : ಎಚ್‌ಡಿಕೆ

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ಇದನ್ನು ಓದಿ: ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.

ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

33 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago