ರಾಜ್ಯ

ಕಿರಣ್ ಮುಜುಂದಾರ್ ಟೀಕೆ ನಿರರ್ಥಕ : ಎಚ್‌ಡಿಕೆ

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ಇದನ್ನು ಓದಿ: ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.

ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago