ರಾಜ್ಯ

ಕಿರಣ್ ಮುಜುಂದಾರ್ ಟೀಕೆ ನಿರರ್ಥಕ : ಎಚ್‌ಡಿಕೆ

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು.

ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು.

ಇದನ್ನು ಓದಿ: ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ ಮೇಲೆ ಗಮನವಿಟ್ಟು ಸಮಯ ಪೋಲು ಮಾಡುತ್ತಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿದ ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರ ಟ್ವೀಟ್ ಗೆ ಈ ಸರ್ಕಾರ ಪ್ರತಿ ಟೀಕೆ ಮಾಡುತ್ತಿರುವುದು ಸರಿಯಲ್ಲ. ಒಂದು ಸರ್ಕಾರದ ವರ್ತನೆ ಇರಬೇಕಾದದ್ದು ಹೀಗಲ್ಲ ಎಂದು ಸಚಿವರು ಹೇಳಿದರು.

ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಬೆಂಗಳೂರಿನಲ್ಲಿ ಜನರಿಗೆ ಬಹಳ ತೊಂದರೆ ಆಗಿದೆ. ನಾನು ಸಿಎಂ ಆಗಿದ್ದಾಗ ನನ್ನ ಕಾಲದ ಎರಡೂ ಅವಧಿಯಲ್ಲೂ ಗುಂಡಿಗಳ ಬಗ್ಗೆ ಯಾವ ಉದ್ಯಮಿಗಳೂ ಟೀಕೆ ಮಾಡಲಿಲ್ಲ. 2006-07ರಲ್ಲಿ 59 ರಸ್ತೆಗಳ ಅಗಲೀಕರಣಕ್ಕೆ ಮಂಜೂರಾತಿ ನೀಡಿ ಐದಾರು ತಿಂಗಳಲ್ಲೇ ಮುಗಿಸಲಾಗಿತ್ತು. ಇವರಿಗೆ ಕೆಲಸ ಮಾಡಲು ಏನು ಅಡ್ಡಿ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈಗಲೂ ಇವರು ಮಾಡುತ್ತಿರುವ ಕೆಲಸಗಳು ನನ್ನ ಅವಧಿಯಲ್ಲಿ ನಾನು ಮಂಜೂರಾತಿ ನೀಡಿದ್ದು. ಈ ಸರ್ಕಾರಕ್ಕೆ ಜನರ ಕೆಲಸ ಮಾಡುವುದು ಬಿಟ್ಟು ವಿನಾಕಾರಣ ಕಾಲಹರಣ ಮಾಡುತ್ತಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಕೊಡುವ ಸವಲತ್ತು, ರಿಯಾಯ್ತಿಗಳ ಬಗ್ಗೆ ಹೇಳಿದರೆ ಅಲ್ಲಿಗೇ ಹೋಗಲಿ, ಇಲ್ಲಿಗ್ಯಾಕೆ ಬಂದ್ರು ಅಂತಾರೆ. ಹೀಗೆ ಹೇಳಿದರೆ ಯಾವ ಉದ್ಯಮ ರಾಜ್ಯಕ್ಕೆ ಬರುತ್ತದೆ ಎಂದು ಅವರು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

5 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

6 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

7 hours ago