ರಾಜ್ಯ

ಗ್ರೇಟರ್ ಬೆಂಗಳೂರಿನಿಂದ ಕೆಂಪೇಗೌಡರ ಬೆಂಗಳೂರಿಗೆ ಧಕ್ಕೆ ಇಲ್ಲ ; ಜಾರ್ಜ್‌ ಸ್ಪಷ್ಟನೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರಿನಿಂದ ಕೆಂಪೇಗೌಡರ ಬೆಂಗಳೂರಿಗೆ ಧಕ್ಕೆಯಾಗುತ್ತದೆ ಎಂಬ ಆರೋಪಗಳಲ್ಲಿ ಹುರುಳಿಲ್ಲ. ಆಡಳಿತದ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ರೂಪಿಸಲಾಗಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದ ಮೇಲೆ ಹೆಚ್ಚುವರಿ ಪಾಲಿಕೆಗಳನ್ನು ರಚಿಸಲಾಗುತ್ತದೆಯಾದರೂ ಅವುಗಳ ಹೆಸರು ಬೆಂಗಳೂರು ದಕ್ಷಿಣ, ಉತ್ತರ, ನಗರ ಎಂದೇ ಇರುತ್ತದೆಯೇ ಹೊರತು ಬದಲಾವಣೆ ಆಗುವುದಿಲ್ಲ. ಒಂದು ಪಾಲಿಕೆಯ ಆದಾಯವನ್ನು ಇನ್ನೊಂದು ಪಾಲಿಕೆಗೆ ವರ್ಗಾವಣೆ ಮಾಡುವುದಿಲ್ಲ. ಆರ್ಥಿಕವಾಗಿ ದುರ್ಬಲವಾದ ಪಾಲಿಕೆಗಳಿಗೆ ಸರ್ಕಾರದಿಂದ ಹೆಚ್ಚುವರಿ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

10 mins ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

40 mins ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

4 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

4 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

4 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

4 hours ago