ರಾಜ್ಯ

ನಂಜನಗೂಡಿನಲ್ಲಿ ಪ್ರವಾಹದ ಭೀತಿ: ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಕೆ.ಎಂ ಗಾಯತ್ರಿ

ನಂಜನಗೂಡು: ಕಬಿನಿ ಜಲಾಶಯದಲ್ಲಿ ಹೊರಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಲ್ಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಕ್ಕಹಳ್ಳಿ, ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಜ್ಜಿಗೆ, ತೊರೆಮಾವು, ಹುಲ್ಲಹಳ್ಳಿ-ರಾಂಪುರ ಸೇತುವೆ, ನದಿ ಪ್ರಾಂತ್ಯದ ಪೌರಕಾರ್ಮಿಕರ ಕಾಲೋನಿ, ನಲ್ಲಿತಾಳಪುರ ಗ್ರಾಮ ಪಂಚಾಯಿತಿಯ ಕಡಬೂರು ಸೇತುವೆ ಸೇರಿದಂತೆ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿ, ಸ್ಥಳೀಯರಿಂದ ಅಹವಾಲು ಕೇಳಿದರು.

ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. ಟಾಸ್ಕ್ ಫೋರ್ಸ್ ತಂಡವು ಕಾರ್ಯಪ್ರವೃತ್ತರಾಗಬೇಕು. ನೀರಿನ‌ ಪ್ರಮಾಣ ಹೆಚ್ಚಾದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುಂತೆ, ಹಾಗೂ ಸ್ಥಳೀಯ ಈಜುಗಾರರನ್ನು ಗುರುತಿಸುಬೇಕು. ಪ್ರವಾಹ ಭೀತಿ ಪ್ರದೇಶದಲ್ಲಿ ಸ್ಥಳೀಯವಾಗಿ ಸಿಬ್ಬಂದಿ ನಿಯೋಜಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.

ಸಾಂಕ್ರಾಮಿಕ ರೋಗ ಹರಡದಂತೆ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕು. ಕುಡಿಯುವ ನೀರನ್ನು ಕಾಲ ಕಾಲಕ್ಕೆ ಲ್ಯಾಬ್ ನಲ್ಲಿ ಪರೀಕ್ಷಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರಿರಿಗೆ ಸೂಚಿಸಿದರು.ಇದೇ ವೇಳೆ ಕಲುಶಿತ ನೀರು ಸೇರದಂತೆ ಪ್ರತಿದಿನ ಗ್ರಾಮ ಪಂಚಾಯಿತಿಯಲ್ಲಿ ನೀರನ್ನು FTK ಪರೀಕ್ಷೆಗೆ ಒಳಪಡಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.

ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ಮಾಡಿ ಜನರ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಆರೊಗ್ಯಾಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು (ಅಭಿವೃದ್ಧಿ) ಡಾ. ಕೃಷ್ಣರಾಜು, ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯ ಪಾಲಕ ಅಭಿಯಂತರರಾದ ರಂಜಿತ್ ಕುಮಾರ್ , ಕಾರ್ಯ ನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

3 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

3 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

13 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

14 hours ago