ರಾಜ್ಯ

ಗ್ರಾಹಕರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆಎಂಎಫ್‌: ಯಾವ ಯಾವ ದರ ಇಳಿಕೆ ಗೊತ್ತಾ?

ಬೆಂಗಳೂರು: ಗ್ರಾಹಕರಿಗೆ ಕೆಎಂಎಫ್‌ ಗುಡ್‌ನ್ಯೂಸ್‌ ನೀಡಿದ್ದು, ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡಿದೆ.

ಕೆಎಂಎಫ್‌ ಪನ್ನೀರಿಗೆ ಕೆಜಿಗೆ 17ರೂ ಇಳಿಕೆಯಾಗಿದೆ. ಗುಡ್‌ಲೈಫ್‌ ಹಾಲಿನ ದರ 1 ಲೀಟರ್‌ಗೆ 2 ರೂ ಇಳಿಕೆಯಾಗಲಿದೆ. ಆದರೆ ಹಾಲು ಹಾಗೂ ಮೊಸರಿನ ದರ ಯಥಾಸ್ಥಿತಿ ಮುಂದುವರಿಯಲಿದೆ.

1000 ಎಂಎಲ್‌ ತುಪ್ಪ ಹಳೆಯ ದರ 650 ಇದ್ದರೆ, ಹೊಸದರ 610ರೂಪಾಯಿಗೆ ಇಳಿಕೆಯಾಗಿದೆ. 500 ಮಿಲಿ ಲೀಟರ್‌ ಬೆಣ್ಣೆಯ ಹಳೆಯ ದರ 306 ಇದ್ದರೆ ಹೊಸದರ 286 ರೂಪಾಯಿ ಇರಲಿದೆ. ಇನ್ನು 1 ಕೆಜಿ ಪನ್ನೀರ್‌ ಹಳೆಯ ದರ 425 ಇದ್ದರೆ, ಹೊಸ ದರ್‌ 408 ರೂಪಾಯಿ ಆಗಲಿದೆ.

70 ರೂ ಇದ್ದ ಲೀಟರ್‌ ಗುಡ್‌ಲೈಫ್‌ ಹಾಲು ಇನ್ನುಮುಂದೆ 68 ರೂಪಾಯಿ ಆಗಲಿದೆ. ಚೀಸ್‌ ಒಂದಕ್ಕೆ ಹಳೆಯ ದರ 480 ಇದ್ದರೆ ಹೊಸದರ 450 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸಂಸ್ಕರಿಸಿದ ಚೀಸ್‌ ಹಳೆಯದರ 530 ರೂ ಇದ್ದರೆ ಹೊಸದರ 497ಕ್ಕೆ ಇಳಿಕೆ ಮಾಡಲಾಗಿದೆ.

ಸೆಪ್ಟೆಂಬರ್.‌22ರಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

38 mins ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

58 mins ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

1 hour ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

1 hour ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

4 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

4 hours ago