ಬೆಂಗಳೂರು : ಕರ್ನಾಟಕ ಸರ್ಕಾರಿ ಸಹಭಾಗಿತ್ವದ ಹೆಮ್ಮೆಯ ಉದ್ಯಮಗಳಲ್ಲಿ ಒಂದಾಗಿರುವ ಕರ್ನಾಟಕ ಹಾಲು ಒಕ್ಕೂಟದಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್ ಟನ್ಗೂ ಅಧಿಕ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ.
ರಾಜ್ಯದ ಹೆಮ್ಮೆಯ ಉದ್ಯಮವಾದ ಕೆಎಂಎಫ್ನಿಂದ ದಸರಾ ಹಬ್ಬದಲ್ಲಿ ದಾಖಲೆ ಮಟ್ಟದಲ್ಲಿ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಕೆಎಂಎಫ್ ಸಿಹಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಸರಾ ಹಬ್ಬದ ಸಮಯದಲ್ಲಿ ಹಾಲು ಒಕ್ಕೂಟದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಿಹಿ ಮಾರಾಟ ಮಾಡಲಾಗಿದೆ. ಅತಿ ಹೆಚ್ಚು ಸಿಹಿ ತಿನಿಸು ಮಾರಾಟ ಮಾಡಿ ನೂತನ ದಾಖಲೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದುಪ್ಪಟ್ಟು ಅಂದರೆ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡಲಾಗಿದೆ.
ಕೆಎಂಎಪ್ನ ಮೈಸೂರು ಪಾಕ್, ಧಾರವಾಡ ಪೇಡ ಸೇರಿದಂತೆ, ಗುಲಾಬ್ ಜಾಮೂನ್, ರಸಗುಲ್ಲಾ, ಹಲ್ವಾ, ಬಿಸ್ಕತ್ಸ್ ಸೇರಿದಂತೆ ನಾನಾ ಬಗೆಯ ಸಿಹಿ ತಿನಿಸುಗಳ ಮಾರಾಟದಲ್ಲಿ ಭಾರಿ ಹೆಚ್ಚಳವಾಗಿದೆ. ಪ್ರತಿವರ್ಷ 180ರಿಂದ 200 ಮೆಟ್ರಿಕ್ ಟನ್ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಈ ಬಾರಿ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ಮೈಲಿಗಲ್ಲಿನ ಇತಿಹಾಸ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಬೇಸಿಗೆಗೆ ಹೊಸ ಉತ್ಪನ್ನಗಳನ್ನು ದಾಸ್ತಾನು ಮಾಡಲು ಚಿಂತನೆ ಮಾಡಿದೆ. ಜೊತೆಗೆ, ಹಾಲಿನ ಉತ್ಪಾದನೆ ಪ್ರಮಾಣದಲ್ಲೂ ಏರಿಕೆಯಾಗಿದ್ದು ಗ್ರಾಹಕರಿಗೆ ಉತ್ತಮ ಸಿಹಿ ತಿನಿಸುಗಳನ್ನು ಮಾರಾಟ ಮಾಡಲು ಕೆಎಂಎಫ್ ಸೂಕ್ತ ಸಿದ್ಧತೆಯನ್ನು ಮಾಡಿಕೊಂಡಿದೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…