ರಾಜ್ಯ

ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್‌ ಟನ್‌ ಸ್ವೀಟ್ಸ್‌ ಮಾರಾಟ

ಬೆಂಗಳೂರು : ಕರ್ನಾಟಕ ಸರ್ಕಾರಿ ಸಹಭಾಗಿತ್ವದ ಹೆಮ್ಮೆಯ ಉದ್ಯಮಗಳಲ್ಲಿ ಒಂದಾಗಿರುವ ಕರ್ನಾಟಕ ಹಾಲು ಒಕ್ಕೂಟದಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್‌ ಟನ್‌ಗೂ ಅಧಿಕ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ.

ರಾಜ್ಯದ ಹೆಮ್ಮೆಯ ಉದ್ಯಮವಾದ ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ ದಾಖಲೆ ಮಟ್ಟದಲ್ಲಿ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಕೆಎಂಎಫ್ ಸಿಹಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದಸರಾ ಹಬ್ಬದ ಸಮಯದಲ್ಲಿ ಹಾಲು ಒಕ್ಕೂಟದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಿಹಿ ಮಾರಾಟ ಮಾಡಲಾಗಿದೆ. ಅತಿ ಹೆಚ್ಚು ಸಿಹಿ ತಿನಿಸು ಮಾರಾಟ ಮಾಡಿ ನೂತನ‌ ದಾಖಲೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದುಪ್ಪಟ್ಟು ಅಂದರೆ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡಲಾಗಿದೆ.

ಕೆಎಂಎಪ್‌ನ ಮೈಸೂರು ಪಾಕ್, ಧಾರವಾಡ ಪೇಡ ಸೇರಿದಂತೆ, ಗುಲಾಬ್‌ ಜಾಮೂನ್‌, ರಸಗುಲ್ಲಾ, ಹಲ್ವಾ, ಬಿಸ್ಕತ್ಸ್‌ ಸೇರಿದಂತೆ ನಾನಾ ಬಗೆಯ ಸಿಹಿ ತಿನಿಸುಗಳ ಮಾರಾಟದಲ್ಲಿ ಭಾರಿ ಹೆಚ್ಚಳವಾಗಿದೆ. ಪ್ರತಿವರ್ಷ 180ರಿಂದ 200 ಮೆಟ್ರಿಕ್ ಟನ್ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಈ ಬಾರಿ 400 ಮೆಟ್ರಿಕ್ ಟನ್ ಸಿಹಿ ಮಾರಾಟ ಮಾಡುವ ಮೂಲಕ ಕೆಎಂಎಫ್‌ ಹೊಸ ಮೈಲಿಗಲ್ಲಿನ ಇತಿಹಾಸ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಬೇಸಿಗೆಗೆ ಹೊಸ ಉತ್ಪನ್ನಗಳನ್ನು ದಾಸ್ತಾನು ಮಾಡಲು ಚಿಂತನೆ ಮಾಡಿದೆ. ಜೊತೆಗೆ, ಹಾಲಿನ ಉತ್ಪಾದನೆ ಪ್ರಮಾಣದಲ್ಲೂ ಏರಿಕೆಯಾಗಿದ್ದು ಗ್ರಾಹಕರಿಗೆ ಉತ್ತಮ ಸಿಹಿ ತಿನಿಸುಗಳನ್ನು ಮಾರಾಟ ಮಾಡಲು ಕೆಎಂಎಫ್ ಸೂಕ್ತ ಸಿದ್ಧತೆಯನ್ನು ಮಾಡಿಕೊಂಡಿದೆ.

 

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

9 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago