ರಾಜ್ಯ

ಹಾಲು ಸಂಗ್ರಹದಲ್ಲಿ ಮತ್ತೆ ದಾಖಲೆ ಬರೆದ ಕೆಎಂಎಫ್‌

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್‌ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್‌ಗೆ ಸಾಧ್ಯವಾಗಿದೆ. ಈ ಮೂಲಕ ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮೂಡಿಸಿದೆ.

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಹಸಿರು ಮೇವು ಚಿಗುರೊಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆಯಿಂದ ಹಾಲಿನ ಉತ್ಪಾದನೆ ಹೆಚ್ಚಳವಾಗಿದೆ.

ಇದನ್ನೂ ಓದಿ:- ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌
 

ಇನ್ನು ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲೂ ಕೆಎಂಎಫ್‌ ಸಾರ್ವಕಾಲಿಕ ದಾಖಲೆ ಮಾಡಲಿದೆ ಎನ್ನಲಾಗುತ್ತಿದ್ದು, ಕೆಎಂಎಫ್‌ ಉದ್ಯವೂ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

35 mins ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

4 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

6 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

17 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

19 hours ago