ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ನಿಗದಿಯಂತೆ ಇಂದು ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರವಾಸವನ್ನು ನಿಗದಿ ಮಾಡಲಾಗಿತ್ತು. ಆದರೆ, ಇಂದು ಆಸ್ಪತ್ರೆಗೆ ತಪಾಸಣೆಗೆ ಹೋಗಬೇಕಾಗಿದ್ದ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…