ರಾಜ್ಯ

ಕೊಡಗು: ನಾಗರಹೊಳೆಯಲ್ಲಿ ಬೀಡುಬಿಟ್ಟ ವಯನಾಡಿನಲ್ಲಿ ವ್ಯಕ್ತಿ ಕೊಂದಿದ್ದ ಆನೆ

ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು ಬಂದಿದೆ. ಹೀಗಾಗಿ ನಾಗರಹೊಳೆಯ ನಾಣಚ್ಚಿ, ಹುಲಿಕಲ್ಲು, ಆಲಂದೋಡು ವ್ಯಾಪ್ತಿಯಲ್ಲಿ ಆಣೆ ಸೆರೆಗೆ ಕ್ರಮ ವಹಿಸಲಾಗಿದೆ.

ಮುಖಾನ್‌ ಆನೆಗೆ ಬೇಲೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರೇಡಿಯೋ ಕಾಲರ್ ಅಳವಡಿಸಿ ಅದನ್ನು ಚಾಮರಾಜನಗರ ವ್ಯಾಪ್ತಿಯ ಕಾಡಿನಲ್ಲಿ ಬಿಡಲಾಗಿತ್ತು. ಅದು ಅಲ್ಲಿಂದ ಕೇರಳದ ವಯನಾಡಿಗೆ ತೆರಳಿತ್ತು.

ಕೇರಳದ ವಯನಾಡಿನಲ್ಲಿ ಫೆಬ್ರವರಿ 10 ರಂದು ವಯನಾಡಿನ ಪ್ರಜೀಶ್ ಎಂಬವವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿತ್ತು. ಈ ಆನೆಗೆ ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಸಿರುವ ಕಾರಣ ಮೃತ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು.

ಪರಿಹಾರದ ಹಣಕ್ಕೆ ರಾಜಕೀಯ ಬಣ್ಣ ಬಂದದ್ದರಿಂದ ಮೃತ ವ್ಯಕ್ತಿಯ ಕುಟುಂಬದವರು, ಕರ್ನಾಟಕ ಸರ್ಕಾರದ ಪರಿಹಾರ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.

ಈ ಎಲ್ಲ ವಿದ್ಯಮಾನಗಳ ಬಳಿಕ ಕಾಡಾನೆಯ ತೆರಿಗೆ ಅರಣ್ಯ ಇಲಾಖೆ ಮತ್ತೆ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಅದರಂತೆ ಇದೀಗ ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಆನೆ ಇರುವ ಸುಳಿವು ಸಿಕ್ಕಿದ್ದು, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ಮಾಡಲು ಮುಂದಾಗಿದೆ.

andolana

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

9 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

10 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

10 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

11 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

11 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

13 hours ago