ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.
ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು ಬಂದಿದೆ. ಹೀಗಾಗಿ ನಾಗರಹೊಳೆಯ ನಾಣಚ್ಚಿ, ಹುಲಿಕಲ್ಲು, ಆಲಂದೋಡು ವ್ಯಾಪ್ತಿಯಲ್ಲಿ ಆಣೆ ಸೆರೆಗೆ ಕ್ರಮ ವಹಿಸಲಾಗಿದೆ.
ಮುಖಾನ್ ಆನೆಗೆ ಬೇಲೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರೇಡಿಯೋ ಕಾಲರ್ ಅಳವಡಿಸಿ ಅದನ್ನು ಚಾಮರಾಜನಗರ ವ್ಯಾಪ್ತಿಯ ಕಾಡಿನಲ್ಲಿ ಬಿಡಲಾಗಿತ್ತು. ಅದು ಅಲ್ಲಿಂದ ಕೇರಳದ ವಯನಾಡಿಗೆ ತೆರಳಿತ್ತು.
ಕೇರಳದ ವಯನಾಡಿನಲ್ಲಿ ಫೆಬ್ರವರಿ 10 ರಂದು ವಯನಾಡಿನ ಪ್ರಜೀಶ್ ಎಂಬವವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿತ್ತು. ಈ ಆನೆಗೆ ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಸಿರುವ ಕಾರಣ ಮೃತ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು.
ಪರಿಹಾರದ ಹಣಕ್ಕೆ ರಾಜಕೀಯ ಬಣ್ಣ ಬಂದದ್ದರಿಂದ ಮೃತ ವ್ಯಕ್ತಿಯ ಕುಟುಂಬದವರು, ಕರ್ನಾಟಕ ಸರ್ಕಾರದ ಪರಿಹಾರ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.
ಈ ಎಲ್ಲ ವಿದ್ಯಮಾನಗಳ ಬಳಿಕ ಕಾಡಾನೆಯ ತೆರಿಗೆ ಅರಣ್ಯ ಇಲಾಖೆ ಮತ್ತೆ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಅದರಂತೆ ಇದೀಗ ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಆನೆ ಇರುವ ಸುಳಿವು ಸಿಕ್ಕಿದ್ದು, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ಮಾಡಲು ಮುಂದಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…