ರಾಜ್ಯ

ಕೊಡಗು: ನಾಗರಹೊಳೆಯಲ್ಲಿ ಬೀಡುಬಿಟ್ಟ ವಯನಾಡಿನಲ್ಲಿ ವ್ಯಕ್ತಿ ಕೊಂದಿದ್ದ ಆನೆ

ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು ಬಂದಿದೆ. ಹೀಗಾಗಿ ನಾಗರಹೊಳೆಯ ನಾಣಚ್ಚಿ, ಹುಲಿಕಲ್ಲು, ಆಲಂದೋಡು ವ್ಯಾಪ್ತಿಯಲ್ಲಿ ಆಣೆ ಸೆರೆಗೆ ಕ್ರಮ ವಹಿಸಲಾಗಿದೆ.

ಮುಖಾನ್‌ ಆನೆಗೆ ಬೇಲೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರೇಡಿಯೋ ಕಾಲರ್ ಅಳವಡಿಸಿ ಅದನ್ನು ಚಾಮರಾಜನಗರ ವ್ಯಾಪ್ತಿಯ ಕಾಡಿನಲ್ಲಿ ಬಿಡಲಾಗಿತ್ತು. ಅದು ಅಲ್ಲಿಂದ ಕೇರಳದ ವಯನಾಡಿಗೆ ತೆರಳಿತ್ತು.

ಕೇರಳದ ವಯನಾಡಿನಲ್ಲಿ ಫೆಬ್ರವರಿ 10 ರಂದು ವಯನಾಡಿನ ಪ್ರಜೀಶ್ ಎಂಬವವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿತ್ತು. ಈ ಆನೆಗೆ ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಸಿರುವ ಕಾರಣ ಮೃತ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು.

ಪರಿಹಾರದ ಹಣಕ್ಕೆ ರಾಜಕೀಯ ಬಣ್ಣ ಬಂದದ್ದರಿಂದ ಮೃತ ವ್ಯಕ್ತಿಯ ಕುಟುಂಬದವರು, ಕರ್ನಾಟಕ ಸರ್ಕಾರದ ಪರಿಹಾರ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.

ಈ ಎಲ್ಲ ವಿದ್ಯಮಾನಗಳ ಬಳಿಕ ಕಾಡಾನೆಯ ತೆರಿಗೆ ಅರಣ್ಯ ಇಲಾಖೆ ಮತ್ತೆ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಅದರಂತೆ ಇದೀಗ ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಆನೆ ಇರುವ ಸುಳಿವು ಸಿಕ್ಕಿದ್ದು, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ಮಾಡಲು ಮುಂದಾಗಿದೆ.

andolana

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

2 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

2 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

3 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

3 hours ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

3 hours ago