ರಾಜ್ಯ

ಕೊಡಗು: ನಾಗರಹೊಳೆಯಲ್ಲಿ ಬೀಡುಬಿಟ್ಟ ವಯನಾಡಿನಲ್ಲಿ ವ್ಯಕ್ತಿ ಕೊಂದಿದ್ದ ಆನೆ

ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು ಬಂದಿದೆ. ಹೀಗಾಗಿ ನಾಗರಹೊಳೆಯ ನಾಣಚ್ಚಿ, ಹುಲಿಕಲ್ಲು, ಆಲಂದೋಡು ವ್ಯಾಪ್ತಿಯಲ್ಲಿ ಆಣೆ ಸೆರೆಗೆ ಕ್ರಮ ವಹಿಸಲಾಗಿದೆ.

ಮುಖಾನ್‌ ಆನೆಗೆ ಬೇಲೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರೇಡಿಯೋ ಕಾಲರ್ ಅಳವಡಿಸಿ ಅದನ್ನು ಚಾಮರಾಜನಗರ ವ್ಯಾಪ್ತಿಯ ಕಾಡಿನಲ್ಲಿ ಬಿಡಲಾಗಿತ್ತು. ಅದು ಅಲ್ಲಿಂದ ಕೇರಳದ ವಯನಾಡಿಗೆ ತೆರಳಿತ್ತು.

ಕೇರಳದ ವಯನಾಡಿನಲ್ಲಿ ಫೆಬ್ರವರಿ 10 ರಂದು ವಯನಾಡಿನ ಪ್ರಜೀಶ್ ಎಂಬವವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿತ್ತು. ಈ ಆನೆಗೆ ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಸಿರುವ ಕಾರಣ ಮೃತ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು.

ಪರಿಹಾರದ ಹಣಕ್ಕೆ ರಾಜಕೀಯ ಬಣ್ಣ ಬಂದದ್ದರಿಂದ ಮೃತ ವ್ಯಕ್ತಿಯ ಕುಟುಂಬದವರು, ಕರ್ನಾಟಕ ಸರ್ಕಾರದ ಪರಿಹಾರ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.

ಈ ಎಲ್ಲ ವಿದ್ಯಮಾನಗಳ ಬಳಿಕ ಕಾಡಾನೆಯ ತೆರಿಗೆ ಅರಣ್ಯ ಇಲಾಖೆ ಮತ್ತೆ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಅದರಂತೆ ಇದೀಗ ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಆನೆ ಇರುವ ಸುಳಿವು ಸಿಕ್ಕಿದ್ದು, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆ ಮಾಡಲು ಮುಂದಾಗಿದೆ.

andolana

Recent Posts

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

6 mins ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

10 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

12 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

17 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

24 hours ago