ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.
ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್ ಹಾಕಿ ಸಂತ್ರಸ್ತರಿಗೆ ಮನೆಗಳನ್ನು ನೀಡಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ. 26 ಜನರ ದಾಖಲೆಗಳು ಸೂಕ್ತವಾಗಿದ್ದು, ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…