ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು ರಚಿಸಿದ್ದು, ಒಂದು ವಾರದೊಳಗೆ ವರದಿ ನೀಡಬೇಕೆಂದು ಸೂಚಿಸಿದ್ದಾರೆ.
ಯಲಹಂಕದ ಕೋಗಿಲು ಲೇಔಟ್ ಬಳಿ ಇರುವ ಫಕೀರ್ ಕಾಲೋನಿ ವಾಸಿಂ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆಂಬ ಕಾರಣ ನೀಡಿ ಸ್ಥಳೀಯ ಆಡಳಿತ ತೆರವು ಮಾಡಿತ್ತು.
ಈ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡಬೇಕೆಂದು ವಿಜಯೇಂದ್ರ ಅವರು ಸಮಿತಿಗೆ ನಿರ್ದೇಶನ ನೀಡಿದ್ದಾರೆ.
ಸತ್ಯಶೋಧನ ಸಮಿತಿ ಸದಸ್ಯರು:
ಎಸ್.ಆರ್.ವಿಶ್ವನಾಥ್- ಶಾಸಕರು, ಯಲಹಂಕ
ಎಸ್.ಮುನಿರಾಜು – ಶಾಸಕರು, ದಾಸರಹಳ್ಳಿ
ಕೆ.ಎಸ್.ನವೀನ್- ವಿಧಾನಪರಿಷತ್ ಸದಸ್ಯರು
ಮಾಳವಿಕಾ ಅವಿನಾಶ್- ರಾಜ್ಯ ಬಿಜೆಪಿ ಉಪಾಧ್ಯಕ್ಷರು
ರಮೇಶ್ ಗೌಡ- ರಾಜ್ಯ ಕಾರ್ಯದರ್ಶಿ
ಎಸ್.ಹರೀಶ್- ಜಿಲ್ಲಾಧ್ಯಕ್ಷರು ಬೆಂಗಳೂರು ಉತ್ತರ
ಭಾಸ್ಕರ್ ರಾವ್- ನಿವೃತ್ತ ಐಪಿಎಸ್ ಅಧಿಕಾರಿ
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…