ರಾಜ್ಯ

ಕೊಪ್ಪಳ: ಡೆತ್‌ನೋಟ್‌ ಬರೆಸಿಕೊಂಡು ಲೈಂಗಿಕ ದೌರ್ಜನ್ಯ

ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್‌ನೋಟ್‌ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್‌ ನೋಟ್‌ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್‌ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.

ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್‌ನೋಟ್‌ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್‌ನೋಟ್‌ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್‌ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

7 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

10 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

10 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

10 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

10 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

10 hours ago