ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್ ನೋಟ್ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.
ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್ನೋಟ್ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…