ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್ ನೋಟ್ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.
ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್ನೋಟ್ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…