ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್ ನೋಟ್ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇರೆಗೆ, ಅಂಗಡಿ ಮಾಲೀಕ ವೀರೇಶ ನಾಯಕನನ್ನು(೪೭) ಬುಧುವಾರ(ಮೇ.೨೨) ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವೀರೇಶ ನಾಯಕ ಕೊಪ್ಪಳದಲ್ಲಿ ಎಲೆಕ್ಟ್ರಿಕಲ್ ಅಂಗಡಿಯೊಂದರ ಮಾಲೀಕನಾಗಿದ್ದಾನೆ. ಈತ ಅಂಗಡಿಯಲ್ಲಿ ೨೨ ವರ್ಷದ ಯುವತಿಯನ್ನು ಕೆಲಸಕ್ಕೆ ಇರಿಸಿಕೊಂಡಿದ್ದ. ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ. ಯುವತಿ ಮದುವೆಯಾಗುವಂತೆ ಒತ್ತಾಯಿಸಿದರೂ ಒಪ್ಪದ ಆರೋಪಿ, ಅಕ್ರಮ ಸಂಬಂಧ ಮುಂದುವರಿಸುವಂತೆ ಬೆದರಿಸಿದ್ದ. ಆರೋಪಿ ವೀರೇಶ ನಾಯಕನಿಗೆ ವಿವಾಹವಾಗಿ ಮೂವರು ಮಕ್ಕಳಿದ್ದವು.
ಅಕ್ರಮ ಸಂಬಂಧ ಮುಂದುವರೆಸಲು ಯುವತಿ ನಿರಾಕರಿಸಿದ್ದರೆ ಕೋಪಗೊಂಡ ಆರೋಪಿ, ತಮ್ಮ ಅಂಗಡಿಯಲ್ಲಿ ಕೆಲಸ ಮಾಡುವಾಗ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಯುವತಿಯಿಂದ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡಿದ್ದಾರೆ. ಅಲ್ಲದೇ ಈ ಡೆತ್ನೋಟ್ ವಿಷಯವಾಗಿ ವಿಡಿಯೋ ಹೇಳಿಕೆಯನ್ನು ಸಹ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ವೀರೇಶ ನಾಯಕನಿಂದ ಮನನೊಂದ ಯುವತಿ ಅಂಗಡಿಯ ಕೆಲಸ ಬಿಟ್ಟಿದ್ದರು. ಯುವತಿಯ ಕುಟುಂಬ ಬೇರೆ ಕಡೆ ವರನನ್ನು ಹುಡುಕಿ ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಮನೆಯ ಮುಂದೆ ಹೋಗಿ ಗಲಾಟೆ ನಡೆಸಿದ್ದಾನೆ. ಇದರಿಂದ ಬೇಸತ್ತ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ ಮೇ ೨೧ ರಂದು ದೂರು ನೀಡಿದ್ದಾರೆ. ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿ ವೀರೇಶ ನಾಯಕನನ್ನು ಬಂಧಿಸಿದ್ದಾರೆ.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…