ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರು. ನಂತರ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆರ್ ಆಶೋಕ್ ನೇಮಕ ಕೂಡಾ ನಡೆದಿತ್ತು. ನೆನ್ನೆ ಪದಾಧಿಕಾರಿಗಳ ನೇಮಕ ನಡೆದರೇ ಇಂದು ಮತ್ತೊಂದು ಬದಲಾವಣೆಯನ್ನು ಬಿಜೆಪಿ ಮಾಡಿದೆ.
ಹೈ ಕಮಾಂಡ್ ನಿರ್ದೇಶನ ಮೇರೆ ಇದೀಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯಂತೆ ಈ ಆಯ್ಕೆ ನಡೆದಿದ್ದು, ಜೊತೆಗೆ ಬಿಜೆಪಿಗೆ ಹಲವು ನಾಯಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ. ಕೋಟಾ ಅವರು ೨೦೦೯ ರಲ್ಲಿ ಮೊಲದ ಬಾರಿಗೆ ಕರ್ನಾಟಕ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.
ಇನ್ನುಳಿದಂತೆ ಸುನೀಲ್ ವಲ್ಯಾಪುರೆ ಅವರನ್ನು ಪರಿಷತ್ ಉಪನಾಯಕನನ್ನಾಗಿ ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಕೆಳಮನೆಯ ಉಪನಾಯಕ, ರವಿಕುಮಾರ್ ಪರಿಷತ್ ಸಚೇತಕ, ದೊಡ್ಡನಗೌಡ ಜಿ ಪಾಟೀಲ್ ಕೆಳಮನೆಯ ಸಚೇತಕನನ್ನಾಗಿ ಬಿಜೆಪಿ ಆಯ್ಕೆ ಮಾಡಲಾಗಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…