ರಾಜ್ಯ

ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್ ಸಹಕಾರಿ: ಈಶ್ವರ ಖಂಡ್ರೆ

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ
ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ ಹೆಸರಿನ ರೇಡಿಯೋ ಕಾಲರ್ ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

6395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದರು.

ಈವರೆಗೆ ದಕ್ಷಿಣ ಆಫ್ರಿಕಾದೇಶದ ಆಫ್ರಿಕನ್ ವೈಲ್ಡ್ ಲೈಫ್ ಟ್ರಾಕಿಂಗ್ ಮತ್ತು ಜರ್ಮನಿಯ ವೆಕ್ಟ್ರೋನಿಕ್ ಸಂಸ್ಥೆಗಳಿಂದ ಈ ರೇಡಿಯೋ ಕಾಲರ್ ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಸಕಾಲದಲ್ಲಿ ಈ ರೇಡಿಯೋ ಕಾಲರ್ ಲಭ್ಯವಾಗುತ್ತಿರಲಿಲ್ಲ, ಜತೆಗೆ ಒಂದು ರೇಡಿಯೋ ಕಾಲರ್ ಗೆ .6.5 ಲಕ್ಷ ರೂ.ವೆಚ್ಚ ತಗುಲುತ್ತಿತ್ತು. ಆದರೆ ಈಗ ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ರೇಡಿಯೋ ಕಾಲರ್ ಗೆ 1.80 ಲಕ್ಷ ರೂ. ಆಗುತ್ತದೆ. ಇದು ಹೆಚ್ಚಿನ ರೇಡಿಯೋಕಾಲರ್ ಗಳು ಲಭ್ಯವಾಗುವಂತೆ ಮಾಡುವುದಲ್ಲದೆ, ವಿದೇಶೀ ಅವಲಂಬನೆ ಹಾಗೂ ದುಬಾರಿ ವೆಚ್ಚ ತಗ್ಗಿಸುತ್ತದೆ, ವಿದೇಶೀ ವಿನಿಮಯವನ್ನೂ ಉಳಿಸುತ್ತದೆ ಎಂದು ಹೇಳಿದರು.

ಜೊತೆಗೆ ಆಮದು ರೇಡಿಯೋ ಕಾಲರ್ ಗಳ ತೂಕ 16 ರಿಂದ 17 ಕೆ.ಜಿ. ಇರುತ್ತಿತ್ತು. ಆದರೆ ಈಗ ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿರುವ ಕಾಲರ್ ಕೇವಲ 7 ಕೆ.ಜಿ. ತೂಕವಿದ್ದು, ಇದು ಹಗುರವಾಗಿರುತ್ತದೆ ಎಂದರು.

ಪರಿಸರ ಸ್ನೇಹಿ ರೇಡಿಯೋ ಕಾಲರ್ :
ಅರಣ್ಯ ಇಲಾಖೆ ತನ್ನ ಅಗತ್ಯಗಳಿಗೆ ಅನುಗುಣವಾಗಿ ಮತ್ತು ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಾಗುವುದಿಲ್ಲ. ಒಂದೊಮ್ಮೆ ರೇಡಿಯೋ ಕಾಲರ್ ಗಳಲ್ಲಿ ದೋಷ ಕಂಡು ಬಂದರೆ ದುರಸ್ತಿ ಮಾಡಲು, ಬ್ಯಾಟರಿ, ಬಲ್ಬ್, ಸರ್ಕ್ಯೂಟ್ ಬದಲಾಯಿಸಲು ಅವಕಾಶವಿದೆ. ಆದರೆ ಆಮದು ರೇಡಿಯೋ ಕಾಲರ್ ಗಳಲ್ಲಿ ಈ ಅವಕಾಶ ಇರಲಿಲ್ಲ ಎಂದರು.

ಸುರಕ್ಷತೆ ಮತ್ತು ಸಾಮುದಾಯ ಸಬಲೀಕರಣ:
ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ರೇಡಯೋ ಕಾಲರ್ ಗಳಿಂದ ನಮ್ಮ ಕಾಡು ಮತ್ತು ವನ್ಯಜೀವಿಗಳ ಮಾಹಿತಿ ಸೋರಿಕೆ ಆಗುವ ಅಪಾಯವೂ ಇತ್ತು. ಈಗ ದೇಶೀಯವಾಗಿ ಈ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿರುವುದರಿಂದ ಅಂತಹ ಅಪಾಯ ಇರುವುದಿಲ್ಲ. ದತ್ತಾಂಶ ಕೂಡ ಸ್ಥಳೀಯ ಸರ್ವರ್ ಗಳಲ್ಲಿ ಸುರಕ್ಷತವಾಗಿರುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.
ಮೊದಲ ಹಂತದಲ್ಲಿ ಆನೆಗಳ ರೇಡಿಯೋ ಕಾಲರ್ ಮಾತ್ರ ಸಿದ್ಧವಾಗಿದೆ. ಹುಲಿ ಮತ್ತು ಚಿರತೆ ಕಾಲರ್‌ ಗಳ ಅಭಿವೃದ್ಧಿಯೂ ಪ್ರಗತಿಯಲ್ಲಿದ್ದು, ಇದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದರು.

ದೇಶೀಯ ಆನೆ ಕಾಲರ್‌ಗಳ ಪರಿಚಯ:
ಕರ್ನಾಟಕ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಹಾಗೂ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ನ ತಾಂತ್ರಿಕ ತಜ್ಞ ಗುರುದೀಪ ಅವರು ಸ್ವದೇಶಿ ಜಿಎಸ್.ಎಂ ಆಧಾರಿತ ಆನೆ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿದ್ದಾರೆ. ಈ ಕಾಲರ್‌ ಗೆ ಕರ್ನಾಟಕ ಪರಿಶೋಧಿತ ಟ್ರ್ಯಾಕರ್ ಅಥವಾ ಕರ್ನಾಟಕ ಪ್ರಡ್ಯೂಸ್ಡ್ (ಕೆ.ಪಿ. ಟ್ರ್ಯಾಕರ್) ಎಂದು ಹೆಸರಿಸಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಷ್ಕರ್ ಮತ್ತು ಅಜಿತ್ ರೆ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

1 hour ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

1 hour ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

1 hour ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

2 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

2 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

2 hours ago