ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ಗೆ ರಾಜೀನಾಮೆ ನೀಡರುವ ಕೆ.ಪಿ ನಂಜುಂಡಿ ಅವರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿಂದು ಅಧಿಕೃತವಾಗಿ ನಂಜುಂಡಿ ಕಾಂಗ್ರೆಸ್ ಸೇರಿದರು.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಅವರು, ಕಳೆದ ಒಂದು ವಾರಗಳಿಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಜತೆ ಕಾಣಿಸಿಕೊಳ್ಳುತ್ತಿದ್ದರು. ಇದಾದ ಬಳಿಕ ಎಲ್ಲರೂ ನಂಜುಂಡಿ ಅವರನ್ನು ಕಾಂಗ್ರೆಸ್ ಸೇರಲಿದ್ದಾರೆ ಎಂದು ಭಾವಿಸಿದ್ದರು, ಅದನ್ನು ನಿಜ ಮಾಡಿರುವ ಅವರು ಲೋಕಸಭಾ ಚುನಾವಣಾ ವೇಳೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿತ್ತು. ಹೀಗಾಗಿ ಬಿಜೆಪಿಗೆ ರಾಜೀನಾಮೆ ನೀಡಲು ನಮ್ಮ ಸಮಾಜ ನನ್ನನ್ನು ಕಳೆದ 2 ವರ್ಷಗಳಿಂದ ಒತ್ತಾಯಿಸುತ್ತಿತ್ತು. ಬಿಜೆಪಿಯಲ್ಲಿ ನನ್ನ ಹೋರಾಟಕ್ಕೆ ಯಾವುದೇ ಮನ್ನಣೆಯಿಲ್ಲ. ಹಾಗಾಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಮೈಸೂರು: ಇಂದು ಮುಂಜಾನೆ ಚಳಿ, ಮಳೆಯನ್ನು ಲೆಕ್ಕಿಸದೇ ಮೈಸೂರಿನ ಸ್ವಚ್ಚತೆಗಾಗಿ ಫಿಟ್ ಮೈಸೂರು ಸಾಮೂಹಿಕ ಆರೋಗ್ಯ ಮತ್ತು ಜಾಗೃತಿ ನಡಿಗೆ…
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…
ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…
ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪಶ್ಚಿಮ ಬಂಗಾಳದ ರಾಜಕಾರಣ ಎಂದರೆ ಅದು ಬೀದಿ ಕಾಳಗ. ಈ ಬೀದಿ ಕಾಳಗದ ರಾಜಕಾರಣ…
ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…