ರಾಜ್ಯ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ , ಎಂ.ಚಂದ್ರಶೇಖರ್ ಪ್ರತಿಷ್ಠಾನ ಬೆಂಗಳೂರು ಹಾಗೂ ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವತಿಯಿಂದ ‘ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’ – ಹದಿನಾಲ್ಕು ಸಂಪುಟಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ವಿಭಿನ್ನ ಚಿಂತಕ

ಕುವೆಂಪು ಅವರು ಒಬ್ಬ ಮಹಾನ್ ಕವಿಯಾದರೂ ತೇಜಸ್ವಿಯವರು ಅವರದ್ದೇ ವಿಭಿನ್ನ ಆಲೋಚನೆಗಳನ್ನು ಬೆಳೆಸಿಕೊಂಡು ಒಬ್ಬ ಪರಿಸರವಾದಿ, ಸಾಹಿತಿಯಾಗಿ ಬೆಳೆದರು. ತೇಜಸ್ವಿಯವರೊಂದಿಗಿನ ತಮ್ಮ ಹಲವು ವರ್ಷಗಳ ಸಂಬಂಧವನ್ನು ಮೆಲಕು ಹಾಕಿದ ಮುಖ್ಯಮಂತ್ರಿಗಳು ರಾಮದಾಸ್ ಎಂಬ ಕನ್ನಡ ಪ್ರಾಧ್ಯಾಪಕರಿಗೆ ಸ್ನೇಹಿತರಾಗಿದ್ದ ತೇಜಸ್ವಿಯವರು ಮೈಸೂರಿಗೆ ಬಂದಾಗ ರಾಮದಾಸ್ ಅವರ ಮನೆಯಲ್ಲಿ ಭೇಟಿ ಮಾಡುತ್ತಿದ್ದ ದಿನಗಳನ್ನು ಸ್ಮರಿಸಿದರು.

ಸಾಮಾಜಿಕ ಬದಲಾವಣೆ ಬಗ್ಗೆ ಕಾಳಜಿ

ತೇಜಸ್ವಿಯವರು ಸಾಹಿತಿಯಾಗಿ ಮಾತನಾಡುವುಕ್ಕಿಂತಲೂ ಸಮಾಜದ ಬದಲಾವಣೆಯ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ಅವರಲ್ಲಿ ಹೊಸ ಚಿಂತನೆಗಳಿದ್ದವು. ಸ್ನೇಹಜೀವಿ ಹಾಗೂ ಸ್ನೇಹಿತರ ಬಗ್ಗೆ ಅಪಾರ ಪ್ರೀತಿ ಅಭಿಮಾನ ಹೊಂದಿದ್ದರು. ತೇಜಸ್ವಿ ಅವರ ಮಾತುಗಳನ್ನು ಕೇಳಲು ನಾನು ಬಹಳ ಉತ್ಸುಕನಾಗಿರುತ್ತಿದ್ದೆ ಎಂದರು.

ತೇಜಸ್ವಿ ಅವರ ತೋಟದಲ್ಲಿ ಉಳಿಯಬೇಕು ಎಂದು ನನಗೆ ಬಹಳ ಸಾರಿ ಕೇಳಿದ್ದರು. ಆದರೆ ಉಳಿದುಕೊಳ್ಳುವ ಸಂದರ್ಭ ಒದಗಿ ಬರಲಿಲ್ಲ ಎಂದು ತಿಳಿಸಿದರು.

ಸಮಯ ದೊರೆತಾಗ ಪುಸ್ತಕ ಓದುವೆ

ತೇಜಸ್ವಿ ಕನ್ನಡನಾಡು ಕಂಡ ಅದ್ಭುತ ಲೇಖಕ. ಅವರ ಕೃತಿ ಜಗತ್ತು ಪುಸ್ತಕಗಳನ್ನು 14 ಸಂಪುಟಗಳಲ್ಲಿ ಶಿವಾರೆಡ್ಡಿಯವರ ಸಂಪಾದಕತ್ವದಲ್ಲಿ ಇಂದು ಲೋಕಾರ್ಪಣೆ ಮಾಡಲಾಗಿದೆ. ಸಮಯ ದೊರೆತಾಗ ಪುಸ್ತಕಗಳನ್ನು ಓದಲು ಪ್ರಯತ್ನ ಮಾಡಲಾಗುವುದು ಎಂದರು.

ಕೃತಿಗಳನ್ನು ಹೊರತರುವಲ್ಲಿ ಉತ್ತಮ ಕೆಲಸ ಮಾಡಲಾಗಿದೆ. ಕೃತಿಗಳನ್ನು ಸಂಪಾದಿಸಲು ಕೂಡ ಅಪಾರವಾದ ಕೆಲಸ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರ ಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಪ್ರೊ.ರವಿವರ್ಮ ಕುಮಾರ್ ಈ ಸಂದರ್ಭದಲ್ಲಿ ಮಾತನಾಡಿದರು.

ಕುವೆಂಪು ವಿಚಾರ ವೇದಿಕೆಯ ಅಧ್ಯಕ್ಷ ಎಂ.ಸಿ ನರೇಂದ್ರ, ತೇಜಸ್ವಿ ಅವರ ಪುತ್ರಿಯರಾದ ಸುಸ್ಮಿತಾ ಹಾಗೂ ಈಶಾನ್ಯ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ. ಕೃಷ್ಣಾ ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

38 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

1 hour ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago