ರಾಜ್ಯ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ , ಎಂ.ಚಂದ್ರಶೇಖರ್ ಪ್ರತಿಷ್ಠಾನ ಬೆಂಗಳೂರು ಹಾಗೂ ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವತಿಯಿಂದ ‘ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’ – ಹದಿನಾಲ್ಕು ಸಂಪುಟಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ವಿಭಿನ್ನ ಚಿಂತಕ

ಕುವೆಂಪು ಅವರು ಒಬ್ಬ ಮಹಾನ್ ಕವಿಯಾದರೂ ತೇಜಸ್ವಿಯವರು ಅವರದ್ದೇ ವಿಭಿನ್ನ ಆಲೋಚನೆಗಳನ್ನು ಬೆಳೆಸಿಕೊಂಡು ಒಬ್ಬ ಪರಿಸರವಾದಿ, ಸಾಹಿತಿಯಾಗಿ ಬೆಳೆದರು. ತೇಜಸ್ವಿಯವರೊಂದಿಗಿನ ತಮ್ಮ ಹಲವು ವರ್ಷಗಳ ಸಂಬಂಧವನ್ನು ಮೆಲಕು ಹಾಕಿದ ಮುಖ್ಯಮಂತ್ರಿಗಳು ರಾಮದಾಸ್ ಎಂಬ ಕನ್ನಡ ಪ್ರಾಧ್ಯಾಪಕರಿಗೆ ಸ್ನೇಹಿತರಾಗಿದ್ದ ತೇಜಸ್ವಿಯವರು ಮೈಸೂರಿಗೆ ಬಂದಾಗ ರಾಮದಾಸ್ ಅವರ ಮನೆಯಲ್ಲಿ ಭೇಟಿ ಮಾಡುತ್ತಿದ್ದ ದಿನಗಳನ್ನು ಸ್ಮರಿಸಿದರು.

ಸಾಮಾಜಿಕ ಬದಲಾವಣೆ ಬಗ್ಗೆ ಕಾಳಜಿ

ತೇಜಸ್ವಿಯವರು ಸಾಹಿತಿಯಾಗಿ ಮಾತನಾಡುವುಕ್ಕಿಂತಲೂ ಸಮಾಜದ ಬದಲಾವಣೆಯ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ಅವರಲ್ಲಿ ಹೊಸ ಚಿಂತನೆಗಳಿದ್ದವು. ಸ್ನೇಹಜೀವಿ ಹಾಗೂ ಸ್ನೇಹಿತರ ಬಗ್ಗೆ ಅಪಾರ ಪ್ರೀತಿ ಅಭಿಮಾನ ಹೊಂದಿದ್ದರು. ತೇಜಸ್ವಿ ಅವರ ಮಾತುಗಳನ್ನು ಕೇಳಲು ನಾನು ಬಹಳ ಉತ್ಸುಕನಾಗಿರುತ್ತಿದ್ದೆ ಎಂದರು.

ತೇಜಸ್ವಿ ಅವರ ತೋಟದಲ್ಲಿ ಉಳಿಯಬೇಕು ಎಂದು ನನಗೆ ಬಹಳ ಸಾರಿ ಕೇಳಿದ್ದರು. ಆದರೆ ಉಳಿದುಕೊಳ್ಳುವ ಸಂದರ್ಭ ಒದಗಿ ಬರಲಿಲ್ಲ ಎಂದು ತಿಳಿಸಿದರು.

ಸಮಯ ದೊರೆತಾಗ ಪುಸ್ತಕ ಓದುವೆ

ತೇಜಸ್ವಿ ಕನ್ನಡನಾಡು ಕಂಡ ಅದ್ಭುತ ಲೇಖಕ. ಅವರ ಕೃತಿ ಜಗತ್ತು ಪುಸ್ತಕಗಳನ್ನು 14 ಸಂಪುಟಗಳಲ್ಲಿ ಶಿವಾರೆಡ್ಡಿಯವರ ಸಂಪಾದಕತ್ವದಲ್ಲಿ ಇಂದು ಲೋಕಾರ್ಪಣೆ ಮಾಡಲಾಗಿದೆ. ಸಮಯ ದೊರೆತಾಗ ಪುಸ್ತಕಗಳನ್ನು ಓದಲು ಪ್ರಯತ್ನ ಮಾಡಲಾಗುವುದು ಎಂದರು.

ಕೃತಿಗಳನ್ನು ಹೊರತರುವಲ್ಲಿ ಉತ್ತಮ ಕೆಲಸ ಮಾಡಲಾಗಿದೆ. ಕೃತಿಗಳನ್ನು ಸಂಪಾದಿಸಲು ಕೂಡ ಅಪಾರವಾದ ಕೆಲಸ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರ ಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ಪ್ರೊ.ರವಿವರ್ಮ ಕುಮಾರ್ ಈ ಸಂದರ್ಭದಲ್ಲಿ ಮಾತನಾಡಿದರು.

ಕುವೆಂಪು ವಿಚಾರ ವೇದಿಕೆಯ ಅಧ್ಯಕ್ಷ ಎಂ.ಸಿ ನರೇಂದ್ರ, ತೇಜಸ್ವಿ ಅವರ ಪುತ್ರಿಯರಾದ ಸುಸ್ಮಿತಾ ಹಾಗೂ ಈಶಾನ್ಯ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ. ಕೃಷ್ಣಾ ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

17 mins ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

2 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

3 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

4 hours ago