ರಾಜ್ಯ

ಸಿಎಂ ಪತ್ನಿ ಪಾರ್ವತಿ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ ; ಎಚ್ಡಿಕೆ ವಿರುದ್ಧ ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು : ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಕುಟುಂಬದ ಮೇಲೆ ಆರೋಪ ಮಾಡಿದ್ದರು. ಸಿಎಂ ಪತ್ನಿ ಹೆಸರಿನ ಆಸ್ತಿ ಮುಡಾ ಸ್ವತ್ತಾಗಿದ್ದು, ಸತ್ತವರ ಹೆಸರಿನಲ್ಲಿ ಜಮೀನು ಡಿನೋಟಿಫಿಕೇಶನ್‌ ಆಗಿದೆ ಎಂದು ಆರೋಪಿಸಿದ್ದರು. ಇದೀಗ ಎಚ್‌ ಡಿ ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಉರುಳಾಡುತ್ತಿದ್ದರು. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇದೀಗ ಗಿನ್ನಿಸ್‌ ದಾಖಲೆಗೆ ಸಾಕಾಗುವಷ್ಟು ಸುಳ್ಳು ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಗೌರವಕೊಟ್ಟು ೧೦ % ಸುಳ್ಳು ಹೇಳುವುದು ಕಡಿಮೆ ಮಾಡಿ. ಮುಡಾ ಹಗರಣದ ಆರೋಪ ಮಾಡಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಲ ನಕ್ಷೆ ತೋರಿಸಿದರು. ನನ್ನ ಬಳಿಯೂ ನೀಲ ನಕ್ಷೆ ಇದೆ. ಕುಮಾರಸ್ವಾಮಿ ಅವರು ನನಗೆ ೧೦ ನಿಮಿಷ ಟೈಂ ಕೊಡಲಿ,ದಾಖಲೆ ಹಿಡಿದು ಮಾಧ್ಯಮಗಳ ಜೊತೆ ಬರುತ್ತೇನೆ ಎಂದು ಸವಾಲು ಹಾಕಿದರು.

ಅಲ್ಲದೆ ಸಿಎಂ ಪತ್ನಿ ಪಾರ್ವತಿಯ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ. ಸುಮ್ಮನೆ ನೀವೇ ಸುಳ್ಳು ಸೃಷ್ಠಿ ಮಾಡಿಕೊಳ್ಳುತ್ತಿದ್ದೀರಾ ಎಂದು ಕಿಡಿಕಾರಿದರು. ಬಳಿಕ  ನಿಂಗ ಬಿನ್‌ ಜವರಾ ದಲಿತಾ ಸಮುದಾಯಕ್ಕೆ ಸೇರಿದವರು. ಕೆಸರೆ ಗ್ರಾಮದಲ್ಲಿ ೨೯೮೫ ರಲ್ಲಿ ಮೈಸೂರು ಡಿಸಿ ಬಹಿರಂಗ ಹರಾಜಿನಲ್ಲಿ ಜಮೀನು ನೀಡಿದ್ದರು. ನಿಂಗ ಎಂಬುವವರಿಗೆ ೧೦೦ ಗೆ ಕೆಸರೆ ಗ್ರಾಮದಲ್ಲಿ ೩.೧೬ ಎಕರೆ ಜಮೀನು ನೀಡಿದ್ದಾರೆ. ನಿಂಗಪ್ಪಗೆ ಮೂರು ಜನ ಮಕ್ಕಳು. ಇವರ ಜಮೀನು ಸೇರಿ ೧೯೯೨ ರಲ್ಲಿ  ಮುಡಾ ೬೦ ಸರ್ವೆ ನಂಬರ್‌ ಗಳನ್ನು  ಭೂಸ್ವಾಧಿನಕ್ಕೆ ನೋಟಿಫಿಕೇಷನ್‌ ಆಗುತ್ತೆ. ೧೯೯೨ ರಲ್ಲಿ ಜಮೀನಿಗೆ ಅವಾರ್ಡ್‌ ಕೂಡ ಆಗುತ್ತದೆ. ಅವಾರ್ಡ್‌ ನೊಟೀಸ್‌ ಅನ್ನು ನಿಂಗಪ್ಪ ಅವರ ಕುಟುಂಬಕ್ಕೆ ನೀಡಲಾಗಿದೆ ಎಂದು ವಿವರಿಸಿದರು.

ಜಮೀನು ಪಾರ್ವತಿ ಸಿದ್ದರಾಮಯ್ಯ ಗೆ ಬಂದಿದ್ದೆ ೨೦೧೦ ರ ಬಳಿಕ. ಈ ೩.೧೬ ಎಕರೆ ಡೀನೋಟಿಫೈ ಅಗಿದ್ದು, ೧೯೯೮ ರಲ್ಲಿ ಆಗ ಜಮೀನಿನ ಮಾಲಿಕತ್ವ ಇದ್ದಿದ್ದು ನಿಂಗ ಹೆಸರಲ್ಲಿ ಎಂದು ವಿವರಿಸಿದರು. ೨೦೦೫ ರಲ್ಲಿ ಜಮೀನು ಕನ್ವರ್ಷನ್‌ ಆಗುತ್ತದೆ. ಮುಡಾ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕಬೇಕಿತ್ತು. ಮುಡಾ ಜಮೀನು ವಿಚಾರದಲ್ಲಿ ತಪ್ಪು ಮಾಡಿದೆ. ಮುಡಾ ನಡವಳಿಯಲ್ಲೆ ತಪ್ಪಾಗಿದೆ ಎಂಬುವುದು ಗೊತ್ತಾಗುತ್ತದೆ. ಮುಡಾ ಸ್ಕ್ಯಾಮ್‌ ಅಲ್ಲ,ಇದು ಸ್ಕ್ಯಾಮ್‌ ಅಂತ ದಯವಿಟ್ಟು ಹೇಳಬೇಡಿ ಎಂದರು

ಅಲ್ಲದೆ ಕುಮಾರಸ್ವಾಮಿಗೆ ಟ್ಯೂಷನ್‌ ಕೊಟ್ಟ ಮೇಷ್ಟ್ರು ಸರಿಯಲ್ಲ. ವ್ಯಕ್ತಿಗಳ ಹೆಸರಲ್ಲಿ ಡಿನೋಟಿಫಿಕೇಷನ್‌ ಆಗಲ್ಲ. ಸರ್ವೆ ನಂಬರ್‌ ಆಧರಿಸಿ ನೋಟಿಫಿಕೇಷನ್‌ ಡಿನೋಟಿಫಿಕೇಷನ್‌ ಆಗುತ್ತದೆ. ಯಾರೋ ಟೈಮ್‌ ಮಾಡಿದ್ದನ್ನ ತಂದು ಬಿಡುಗಡೆ ಮಾಡಬೇಡಿ ಸ್ವಾಮಿ ಎಂದು ವಾಗ್ದಾಳಿ ನಡೆಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago