ರಾಜ್ಯ

ಸಿಎಂ ಪತ್ನಿ ಪಾರ್ವತಿ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ ; ಎಚ್ಡಿಕೆ ವಿರುದ್ಧ ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು : ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಕುಟುಂಬದ ಮೇಲೆ ಆರೋಪ ಮಾಡಿದ್ದರು. ಸಿಎಂ ಪತ್ನಿ ಹೆಸರಿನ ಆಸ್ತಿ ಮುಡಾ ಸ್ವತ್ತಾಗಿದ್ದು, ಸತ್ತವರ ಹೆಸರಿನಲ್ಲಿ ಜಮೀನು ಡಿನೋಟಿಫಿಕೇಶನ್‌ ಆಗಿದೆ ಎಂದು ಆರೋಪಿಸಿದ್ದರು. ಇದೀಗ ಎಚ್‌ ಡಿ ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಉರುಳಾಡುತ್ತಿದ್ದರು. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇದೀಗ ಗಿನ್ನಿಸ್‌ ದಾಖಲೆಗೆ ಸಾಕಾಗುವಷ್ಟು ಸುಳ್ಳು ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಗೌರವಕೊಟ್ಟು ೧೦ % ಸುಳ್ಳು ಹೇಳುವುದು ಕಡಿಮೆ ಮಾಡಿ. ಮುಡಾ ಹಗರಣದ ಆರೋಪ ಮಾಡಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಲ ನಕ್ಷೆ ತೋರಿಸಿದರು. ನನ್ನ ಬಳಿಯೂ ನೀಲ ನಕ್ಷೆ ಇದೆ. ಕುಮಾರಸ್ವಾಮಿ ಅವರು ನನಗೆ ೧೦ ನಿಮಿಷ ಟೈಂ ಕೊಡಲಿ,ದಾಖಲೆ ಹಿಡಿದು ಮಾಧ್ಯಮಗಳ ಜೊತೆ ಬರುತ್ತೇನೆ ಎಂದು ಸವಾಲು ಹಾಕಿದರು.

ಅಲ್ಲದೆ ಸಿಎಂ ಪತ್ನಿ ಪಾರ್ವತಿಯ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ. ಸುಮ್ಮನೆ ನೀವೇ ಸುಳ್ಳು ಸೃಷ್ಠಿ ಮಾಡಿಕೊಳ್ಳುತ್ತಿದ್ದೀರಾ ಎಂದು ಕಿಡಿಕಾರಿದರು. ಬಳಿಕ  ನಿಂಗ ಬಿನ್‌ ಜವರಾ ದಲಿತಾ ಸಮುದಾಯಕ್ಕೆ ಸೇರಿದವರು. ಕೆಸರೆ ಗ್ರಾಮದಲ್ಲಿ ೨೯೮೫ ರಲ್ಲಿ ಮೈಸೂರು ಡಿಸಿ ಬಹಿರಂಗ ಹರಾಜಿನಲ್ಲಿ ಜಮೀನು ನೀಡಿದ್ದರು. ನಿಂಗ ಎಂಬುವವರಿಗೆ ೧೦೦ ಗೆ ಕೆಸರೆ ಗ್ರಾಮದಲ್ಲಿ ೩.೧೬ ಎಕರೆ ಜಮೀನು ನೀಡಿದ್ದಾರೆ. ನಿಂಗಪ್ಪಗೆ ಮೂರು ಜನ ಮಕ್ಕಳು. ಇವರ ಜಮೀನು ಸೇರಿ ೧೯೯೨ ರಲ್ಲಿ  ಮುಡಾ ೬೦ ಸರ್ವೆ ನಂಬರ್‌ ಗಳನ್ನು  ಭೂಸ್ವಾಧಿನಕ್ಕೆ ನೋಟಿಫಿಕೇಷನ್‌ ಆಗುತ್ತೆ. ೧೯೯೨ ರಲ್ಲಿ ಜಮೀನಿಗೆ ಅವಾರ್ಡ್‌ ಕೂಡ ಆಗುತ್ತದೆ. ಅವಾರ್ಡ್‌ ನೊಟೀಸ್‌ ಅನ್ನು ನಿಂಗಪ್ಪ ಅವರ ಕುಟುಂಬಕ್ಕೆ ನೀಡಲಾಗಿದೆ ಎಂದು ವಿವರಿಸಿದರು.

ಜಮೀನು ಪಾರ್ವತಿ ಸಿದ್ದರಾಮಯ್ಯ ಗೆ ಬಂದಿದ್ದೆ ೨೦೧೦ ರ ಬಳಿಕ. ಈ ೩.೧೬ ಎಕರೆ ಡೀನೋಟಿಫೈ ಅಗಿದ್ದು, ೧೯೯೮ ರಲ್ಲಿ ಆಗ ಜಮೀನಿನ ಮಾಲಿಕತ್ವ ಇದ್ದಿದ್ದು ನಿಂಗ ಹೆಸರಲ್ಲಿ ಎಂದು ವಿವರಿಸಿದರು. ೨೦೦೫ ರಲ್ಲಿ ಜಮೀನು ಕನ್ವರ್ಷನ್‌ ಆಗುತ್ತದೆ. ಮುಡಾ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕಬೇಕಿತ್ತು. ಮುಡಾ ಜಮೀನು ವಿಚಾರದಲ್ಲಿ ತಪ್ಪು ಮಾಡಿದೆ. ಮುಡಾ ನಡವಳಿಯಲ್ಲೆ ತಪ್ಪಾಗಿದೆ ಎಂಬುವುದು ಗೊತ್ತಾಗುತ್ತದೆ. ಮುಡಾ ಸ್ಕ್ಯಾಮ್‌ ಅಲ್ಲ,ಇದು ಸ್ಕ್ಯಾಮ್‌ ಅಂತ ದಯವಿಟ್ಟು ಹೇಳಬೇಡಿ ಎಂದರು

ಅಲ್ಲದೆ ಕುಮಾರಸ್ವಾಮಿಗೆ ಟ್ಯೂಷನ್‌ ಕೊಟ್ಟ ಮೇಷ್ಟ್ರು ಸರಿಯಲ್ಲ. ವ್ಯಕ್ತಿಗಳ ಹೆಸರಲ್ಲಿ ಡಿನೋಟಿಫಿಕೇಷನ್‌ ಆಗಲ್ಲ. ಸರ್ವೆ ನಂಬರ್‌ ಆಧರಿಸಿ ನೋಟಿಫಿಕೇಷನ್‌ ಡಿನೋಟಿಫಿಕೇಷನ್‌ ಆಗುತ್ತದೆ. ಯಾರೋ ಟೈಮ್‌ ಮಾಡಿದ್ದನ್ನ ತಂದು ಬಿಡುಗಡೆ ಮಾಡಬೇಡಿ ಸ್ವಾಮಿ ಎಂದು ವಾಗ್ದಾಳಿ ನಡೆಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

3 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

3 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

3 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

3 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

4 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

4 hours ago