ರಾಜ್ಯ

ಸಿಎಂ ಪತ್ನಿ ಪಾರ್ವತಿ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ ; ಎಚ್ಡಿಕೆ ವಿರುದ್ಧ ಲಕ್ಷ್ಮಣ್ ವಾಗ್ದಾಳಿ

ಬೆಂಗಳೂರು : ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಕುಟುಂಬದ ಮೇಲೆ ಆರೋಪ ಮಾಡಿದ್ದರು. ಸಿಎಂ ಪತ್ನಿ ಹೆಸರಿನ ಆಸ್ತಿ ಮುಡಾ ಸ್ವತ್ತಾಗಿದ್ದು, ಸತ್ತವರ ಹೆಸರಿನಲ್ಲಿ ಜಮೀನು ಡಿನೋಟಿಫಿಕೇಶನ್‌ ಆಗಿದೆ ಎಂದು ಆರೋಪಿಸಿದ್ದರು. ಇದೀಗ ಎಚ್‌ ಡಿ ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಉರುಳಾಡುತ್ತಿದ್ದರು. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇದೀಗ ಗಿನ್ನಿಸ್‌ ದಾಖಲೆಗೆ ಸಾಕಾಗುವಷ್ಟು ಸುಳ್ಳು ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಗೌರವಕೊಟ್ಟು ೧೦ % ಸುಳ್ಳು ಹೇಳುವುದು ಕಡಿಮೆ ಮಾಡಿ. ಮುಡಾ ಹಗರಣದ ಆರೋಪ ಮಾಡಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಲ ನಕ್ಷೆ ತೋರಿಸಿದರು. ನನ್ನ ಬಳಿಯೂ ನೀಲ ನಕ್ಷೆ ಇದೆ. ಕುಮಾರಸ್ವಾಮಿ ಅವರು ನನಗೆ ೧೦ ನಿಮಿಷ ಟೈಂ ಕೊಡಲಿ,ದಾಖಲೆ ಹಿಡಿದು ಮಾಧ್ಯಮಗಳ ಜೊತೆ ಬರುತ್ತೇನೆ ಎಂದು ಸವಾಲು ಹಾಕಿದರು.

ಅಲ್ಲದೆ ಸಿಎಂ ಪತ್ನಿ ಪಾರ್ವತಿಯ ಬಗ್ಗೆ ದಾಖಲೆ ಇಟ್ಟು ಆರೋಪ ಮಾಡಲಿ. ಸುಮ್ಮನೆ ನೀವೇ ಸುಳ್ಳು ಸೃಷ್ಠಿ ಮಾಡಿಕೊಳ್ಳುತ್ತಿದ್ದೀರಾ ಎಂದು ಕಿಡಿಕಾರಿದರು. ಬಳಿಕ  ನಿಂಗ ಬಿನ್‌ ಜವರಾ ದಲಿತಾ ಸಮುದಾಯಕ್ಕೆ ಸೇರಿದವರು. ಕೆಸರೆ ಗ್ರಾಮದಲ್ಲಿ ೨೯೮೫ ರಲ್ಲಿ ಮೈಸೂರು ಡಿಸಿ ಬಹಿರಂಗ ಹರಾಜಿನಲ್ಲಿ ಜಮೀನು ನೀಡಿದ್ದರು. ನಿಂಗ ಎಂಬುವವರಿಗೆ ೧೦೦ ಗೆ ಕೆಸರೆ ಗ್ರಾಮದಲ್ಲಿ ೩.೧೬ ಎಕರೆ ಜಮೀನು ನೀಡಿದ್ದಾರೆ. ನಿಂಗಪ್ಪಗೆ ಮೂರು ಜನ ಮಕ್ಕಳು. ಇವರ ಜಮೀನು ಸೇರಿ ೧೯೯೨ ರಲ್ಲಿ  ಮುಡಾ ೬೦ ಸರ್ವೆ ನಂಬರ್‌ ಗಳನ್ನು  ಭೂಸ್ವಾಧಿನಕ್ಕೆ ನೋಟಿಫಿಕೇಷನ್‌ ಆಗುತ್ತೆ. ೧೯೯೨ ರಲ್ಲಿ ಜಮೀನಿಗೆ ಅವಾರ್ಡ್‌ ಕೂಡ ಆಗುತ್ತದೆ. ಅವಾರ್ಡ್‌ ನೊಟೀಸ್‌ ಅನ್ನು ನಿಂಗಪ್ಪ ಅವರ ಕುಟುಂಬಕ್ಕೆ ನೀಡಲಾಗಿದೆ ಎಂದು ವಿವರಿಸಿದರು.

ಜಮೀನು ಪಾರ್ವತಿ ಸಿದ್ದರಾಮಯ್ಯ ಗೆ ಬಂದಿದ್ದೆ ೨೦೧೦ ರ ಬಳಿಕ. ಈ ೩.೧೬ ಎಕರೆ ಡೀನೋಟಿಫೈ ಅಗಿದ್ದು, ೧೯೯೮ ರಲ್ಲಿ ಆಗ ಜಮೀನಿನ ಮಾಲಿಕತ್ವ ಇದ್ದಿದ್ದು ನಿಂಗ ಹೆಸರಲ್ಲಿ ಎಂದು ವಿವರಿಸಿದರು. ೨೦೦೫ ರಲ್ಲಿ ಜಮೀನು ಕನ್ವರ್ಷನ್‌ ಆಗುತ್ತದೆ. ಮುಡಾ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕಬೇಕಿತ್ತು. ಮುಡಾ ಜಮೀನು ವಿಚಾರದಲ್ಲಿ ತಪ್ಪು ಮಾಡಿದೆ. ಮುಡಾ ನಡವಳಿಯಲ್ಲೆ ತಪ್ಪಾಗಿದೆ ಎಂಬುವುದು ಗೊತ್ತಾಗುತ್ತದೆ. ಮುಡಾ ಸ್ಕ್ಯಾಮ್‌ ಅಲ್ಲ,ಇದು ಸ್ಕ್ಯಾಮ್‌ ಅಂತ ದಯವಿಟ್ಟು ಹೇಳಬೇಡಿ ಎಂದರು

ಅಲ್ಲದೆ ಕುಮಾರಸ್ವಾಮಿಗೆ ಟ್ಯೂಷನ್‌ ಕೊಟ್ಟ ಮೇಷ್ಟ್ರು ಸರಿಯಲ್ಲ. ವ್ಯಕ್ತಿಗಳ ಹೆಸರಲ್ಲಿ ಡಿನೋಟಿಫಿಕೇಷನ್‌ ಆಗಲ್ಲ. ಸರ್ವೆ ನಂಬರ್‌ ಆಧರಿಸಿ ನೋಟಿಫಿಕೇಷನ್‌ ಡಿನೋಟಿಫಿಕೇಷನ್‌ ಆಗುತ್ತದೆ. ಯಾರೋ ಟೈಮ್‌ ಮಾಡಿದ್ದನ್ನ ತಂದು ಬಿಡುಗಡೆ ಮಾಡಬೇಡಿ ಸ್ವಾಮಿ ಎಂದು ವಾಗ್ದಾಳಿ ನಡೆಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

3 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

2 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

5 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

5 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

5 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

8 hours ago