ರಾಜ್ಯ

ಈ ತಿಂಗಳೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಸಹೋದರನಿಗೆ ಮಣೆ ಹಾಕ್ತಾರಾ ಡಿ.ಕೆ.ಶಿವಕುಮಾರ್?‌

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ.

ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು.

ಹೀಗಾಗಿ ಅವರು ಡಿಸಿಎಂ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು 2024ರ ಲೋಕಸಬಾ ಚುನಾವಣೆಯವರೆಗೂ ಮುಂದುವರೆಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿತ್ತು.

ಲೋಕಸಭಾ ಚುನಾವಣೆಯ ನಂತರವು ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಕಂಡಿತ್ತು.

ಈ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಎನ್ನಲಾಗಿದ್ದು, ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿದರೆ ಆ ಜಾಗಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಾಳಯದಲ್ಲಿ ಹಲವು ಹೆಸರುಗಳು ಕೇಳಿ ಬರುತ್ತಿದ್ದು, ಹೈಕಮಾಂಡ್‌ ಸಹ ನೂತನ ಸಾರಥಿಯ ಹೆಸರನ್ನು ಈ ತಿಂಗಳಲ್ಲೇ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧ್ಯಕ್ಷ ಸ್ಥಾನದ ಕುರಿತು ಡಿ.ಕೆ.ಶಿವಕುಮಾರ್‌ ಬಣ ಹಾಗೂ ಸಿದ್ದರಾಮಯ್ಯ ಅವರ ಬಣದಲ್ಲಿ ಹಲವು ನಾಯಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಡಿಕೆಶಿ ಮಾತ್ರ ತಮ್ಮ ಸಹೋದರ ಡಿ.ಕೆ.ಸುರೇಶ್‌ ಅವರಿಗೆ ಅಧ್ಯಕ್ಷ ಸ್ಥಾನವನ್ನು ಕೊಡಿಸುವ ನಿಟ್ಟಿನಲ್ಲಿ ಬಿಗ್‌ ಪ್ಲಾನ್‌ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…

3 mins ago

ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…

11 mins ago

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

34 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

48 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

2 hours ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago