ರಾಜ್ಯ

ಕೆಪಿಎಸ್‌ಸಿ ಪರೀಕ್ಷೆಗಳ ಗೊಂದಲ: ನಾಳೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್‌ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ.18ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕಳೆದ ಡಿ.29 ರಂದು ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪದೋಷಗಳು ಕಂಡುಬಂದಿತ್ತು. ಈ ಬಗ್ಗೆ ಪರಿಶೀಲಿಸಿ, ಇನ್ನು ಮುಂದೆ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರು.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಕೆಪಿಎಸ್‌ಸಿ ಕಾರ್ಯದರ್ಶಿ ರಣದೀಪ್‌ ಚೌಧರಿ, ಡಿಪಿಎಆರ್‌ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಇದೇ 18ರಂದು ಸಭೆ ನಡೆಸಲು ಮುಖ್ಯ ಕಾರ್ಯದರ್ಶಿ ನಿರ್ಧರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

12 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

14 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

16 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

18 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

24 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

30 mins ago