ರಾಜ್ಯ

UPSC ಮಾದರಿಯಲ್ಲಿ KPSC ಕಾರ್ಯನಿರ್ವಹಣೆ: ಸಿಎಂ ಖಡಕ್ ಸೂಚನೆ

ಬೆಂಗಳೂರು: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.

ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್‌ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್‌ ಖಂಡ್ರೆ, ಕೆ. ಸುಧಾಕರ್‌, ಡಾ. ಎಂ.ಸಿ. ಸುಧಾಕರ್‌, ಎನ್.ಎಸ್. ಬೋಸರಾಜು, ರಹೀಂ ಖಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

3 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

7 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

9 hours ago