ರಾಜ್ಯ

ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕೆ.ಪಿ.ಎಸ್.ಸಿ ಅಧಿಸೂಚನೆ

ಬೆಂಗಳೂರು:  ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು.

ಎನ್ ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ 60 ಕ್ಕೂ ಅಧಿಕ ಹುದ್ದೆ ಗಳು‌ ಖಾಲಿ ಇರುವುದನ್ನು ಮನಗಂಡ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ‌ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.

ಈ ನೇಮಕಾತಿಯಿಂದ. ರಾಜ್ಯ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆ.ಪಿ ಎಸ್.ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು . ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ , ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ.

ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಸಿಎಂಗೆ ಕೃಷಿ ಸಚಿವರ ಧನ್ಯವಾದ

ಮುಖ್ಯಮಂತ್ರಿಯವರಿಗೆ ಧನ್ಯವಾದ ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ . ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ . ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

6 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

6 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

10 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

11 hours ago