ರಾಜ್ಯ

ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕೆ.ಪಿ.ಎಸ್.ಸಿ ಅಧಿಸೂಚನೆ

ಬೆಂಗಳೂರು:  ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು.

ಎನ್ ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ 60 ಕ್ಕೂ ಅಧಿಕ ಹುದ್ದೆ ಗಳು‌ ಖಾಲಿ ಇರುವುದನ್ನು ಮನಗಂಡ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ‌ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.

ಈ ನೇಮಕಾತಿಯಿಂದ. ರಾಜ್ಯ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆ.ಪಿ ಎಸ್.ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು . ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ , ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ.

ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಸಿಎಂಗೆ ಕೃಷಿ ಸಚಿವರ ಧನ್ಯವಾದ

ಮುಖ್ಯಮಂತ್ರಿಯವರಿಗೆ ಧನ್ಯವಾದ ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ . ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ . ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago