ರಾಜ್ಯ

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಸೆ.3ರಂದು DPAR 259 SEC 2026ರ ಆದೇಶ ಹೊರಡಿಸಿದ್ದು, CID ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತ್ತು ಮಾಡಲಾಗಿದೆ.

48 ಗಂಟೆಗೂ ಹೆಚ್ಚು ಕಾಲ ವಶದಲ್ಲಿದ್ದ ಹಿನ್ನೆಲೆ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ಹಿಂದೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು MSME (ಬೆಂಗಳೂರು) ನಿರ್ದೇಶಕರಾಗಿದ್ದರು. KPSC ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಕ್ರಮ ಪ್ರಕರಣದಲ್ಲಿ ಅವರನ್ನು ಆಗಸ್ಟ್ 29ರಂದು ಬಂಧಿಸಲಾಗಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 89/2026ಕ್ಕೆ ಸಂಬಂಧಿಸಿದಂತೆ ಬಂಧನ ನಡೆದಿದ್ದು, ಪ್ರಕರಣದ ತನಿಖೆಯನ್ನು CID ನಡೆಸುತ್ತಿದೆ.

ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 318(3) ಹಾಗೂ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ ಕ್ರಮಗಳು) ಕಾಯ್ದೆ-2023ರ ಸೆಕ್ಷನ್ 10ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಬಂಧನದ ಬಳಿಕ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ನಂತರ ಹೆಚ್ಚಿನ ತನಿಖೆಗಾಗಿ ಆಗಸ್ಟ್ 31ರಂದು CID ಪೊಲೀಸ್ ವಶಕ್ಕೆ ಪಡೆದಿದೆ. ಅಧಿಕಾರಿ 48 ಗಂಟೆಗೂ ಹೆಚ್ಚು ಕಾಲ ಅಧಿಕೃತ ವಶದಲ್ಲಿರುವುದನ್ನು ಸರ್ಕಾರ ಅಮಾನತ್ತು ಆದೇಶದಲ್ಲಿ ಪ್ರಮುಖವಾಗಿ ಪರಿಗಣಿಸಿದೆ.

ED ಶೋಧದಲ್ಲೂ ನೇಮಕಾತಿ ಅಕ್ರಮದ ಸುಳಿವು
ಈ ಪ್ರಕರಣ ಮತ್ತಷ್ಟು ಗಂಭೀರವಾಗಲು ಜಾರಿ ನಿರ್ದೇಶನಾಲಯದ (ED) ತನಿಖೆಯ ಮಾಹಿತಿಯೂ ಕಾರಣವಾಗಿದೆ. ಆಗಸ್ಟ್ 23ರಂದು ED ಬೆಂಗಳೂರು ವಲಯ ಕಚೇರಿಯ ಉಪ ನಿರ್ದೇಶಕರು ಸರ್ಕಾರಕ್ಕೆ ಕಳುಹಿಸಿರುವ ಪತ್ರದಲ್ಲಿ, PMLA ಕಾಯ್ದೆಯ ಸೆಕ್ಷನ್ 17ರಡಿ ನಡೆಸಿದ ಶೋಧ ಮತ್ತು ಜಪ್ತಿ ಕಾರ್ಯಾಚರಣೆಯಲ್ಲಿ ದೊರೆತ ವಸ್ತುಗಳು KPSC ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಸೂಚಿಸುತ್ತವೆ ಎಂದು ತಿಳಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಅಂದಿನ KPSC ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಪಾತ್ರದ ಬಗ್ಗೆಯೂ ED ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಲಾಗಿದೆ ಎಂದು ಸರ್ಕಾರ ದಾಖಲಿಸಿದೆ. ಹೀಗಾಗಿ, ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 3(2) ಮತ್ತು 3(3)ರ ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಬಳಸಿ ಅಮಾನತ್ತು ಆದೇಶ ಹೊರಡಿಸಲಾಗಿದೆ.

ಅಮಾನತ್ತು ಅವಧಿಯಲ್ಲಿ ನಿರ್ಬಂಧ
ಅಮಾನತ್ತು ಅವಧಿಯಲ್ಲಿ ಗಂಗ್ವಾರ್ ಅವರಿಗೆ ನಿಯಮಾನುಸಾರ ಜೀವನಾಧಾರ ಭತ್ಯೆ ಪಾವತಿಸಲಾಗುತ್ತದೆ. ಅಲ್ಲದೆ, ರಾಜ್ಯ ಸರ್ಕಾರದ ಲಿಖಿತ ಅನುಮತಿಯಿಲ್ಲದೆ ಯಾವುದೇ ಕಾರಣಕ್ಕೂ ತಮ್ಮ ಪ್ರಧಾನ ಕಚೇರಿಯನ್ನು ತೊರೆಯುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 hour ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

5 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

5 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

5 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

7 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

10 hours ago