ರಾಜ್ಯ

ಕೆಪಿಎಸ್‌ಸಿ: ನಾಳೆ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಸೆ.14, 15 ರಂದು ನಡೆಯಬೇಕಿದ್ದ ಕನ್ನಡ ಭಾಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಮೂಲಕ ಪರೀಕ್ಷಾರ್ಥಿಗಳಿಗೆ ಕೆಪಿಎಸ್‌ಸಿ ಮತ್ತೆ ಶಾಕ್‌ ಕೊಟ್ಟಿದೆ.

ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನಿಡಿದ್ದು, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಸೆ.14, 15ರಂದು ನಡೆಯಬೇಕಿದ್ದ ಕೆಪಿಎಸ್‌ಸಿ ಗ್ರೂಪ್‌ ಬಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಅಭ್ಯರ್ಥಿಗಳನ್ನು ದೂರದ ಸ್ಥಳಗಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿದ್ದರಿಂದ. ನಿಗದಿಯಂತೆ ಪರೀಕ್ಷೆ ಬರೆಯಲು ಅಭ್ಯರ್ಥಿಗಳು ಹೀಗಾಗಲೇ ತಮ್ಮ ಪರೀಕ್ಷಾ ಜಿಲ್ಲಾ ಕೇಂದ್ರಗಳನ್ನು ತಲುಪಿದ್ದರು. ಆದರೆ, ಕೊನೆ ಕ್ಷಣದಲ್ಲಿ ಪರೀಕ್ಷೆ ಮೂಂದೂಡಿದ್ದರಿಂದ ಪರೀಕ್ಷಾರ್ಥಿಗಳು ಕಂಗೆಟ್ಟಿದ್ದಾರೆ.

ಪರೀಕ್ಷೆ ಮುಂದೂಡಿಕೆ ಬಗ್ಗೆ ಕೆಪಿಎಸ್‌ಸಿ ಪ್ರಕಟಣೆ ಹೀಗಿದೆ.
ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.

ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ” ಎಂದು ತಿಳಿಸಲಾಗಿರುತ್ತದೆ.

ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ.

ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.

ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

7 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

10 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

10 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

10 hours ago