ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ ಹೊರಡಿಸಲಾಗಿತ್ತು. ಅದರಂತೆ, ನೇಮಕಾತಿಗೆ ಅರ್ಜಿ ಸಲ್ಲಿಸಲು 2024ರ ನವೆಂಬರ್ 20 ಹಾಗೂ ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 25ಕ್ಕೆ ಕೊನೆಯ ದಿನಾಂಕವೆಂದು ನಿಗದಿ ಪಡಿಸಲಾಗಿತ್ತು.
ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಭ್ಯರ್ಥಿಗಳು ಹಂತ ಹಂತವಾಗಿ ಮಾಡಬೇಕಿದ್ದು, ಅರ್ಜಿ ನಮೂನೆಯಲ್ಲಿ ಮಾಹಿತಿ ಸಲ್ಲಿಸುವುದು, ಅರ್ಜಿ ಶುಲ್ಕ ಪಾವತಿಗೆ ಅಂಚೆ ಇಲಾಖೆಯ ಚಲನ್ ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕ ಪಾವತಿಸಬೇಕಿದೆ. ಅದಕ್ಕೂ ಮುನ್ನ ಅಭ್ಯರ್ಥಿಗಳು ಇ-ಸಹಿ ಪ್ರಕ್ರಿಯ ಪೂರ್ಣಗೊಳಿಸಬೇಕಿರುತ್ತದೆ. ಆದರೆ, ನಿಗದಿಪಡಿಸಿದ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಅಭ್ಯರ್ಥಿಗಳು ತಿಳಿಸಿರುವ ಹಿನ್ನೆಲೆಯಲ್ಲಿ, ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
“ಅಭ್ಯರ್ಥಿಗಳ ಮನವಿ ಪರಿಗಣಿಸಿ ಅರ್ಜಿ ಸಲ್ಲಿಕೆಯ ಮೊದಲೆರಡು ಹಂತ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಸೀಮಿತೊಳಿಸಿ, ಇ-ಸಹಿ ಪ್ರಕ್ರಿಯೆ, ಅಂಚೆ ಕಚೇರಿ ಚಲನ್ ಡೌನ್ಲೋಡ್ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕಗಳನ್ನು ವಿಸ್ತರಿಸಲಾಗಿದೆ.” ಎಂದು ಕೆಪಿಟಿಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ವಿಸ್ತರಿಸಲಾಗಿರುವ ಅವಧಿಯ ಸದುಪಯೋಗ ಪಡೆದು, ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಂತಿಮಗೊಳಿಸುವಂತೆ ಮತ್ತು ಅರ್ಜಿ ಶುಲ್ಕ ಪಾವತಿಸುವಂತೆ ಕೋರಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…