ರಾಜ್ಯ

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು.

ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಯಿತು. ಕವಿಪ್ರನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನೇತೃತ್ವದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಂಡು, 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನಿಗಮದ ಉನ್ನತಾಧಿಕಾರಿಗಳು ವಿತರಿಸಿದರು.

ಎರಡು ದಿನಗಳ ಕಾಲ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಂತ್ರಾಂಶವನ್ನು ನಿಗಮದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಧಿಕಾರಿಗಳು ಅಭಿವೃದ್ದಿ ಪಡಿಸಿದ್ದರು.

ಇದನ್ನೂ ಓದಿ:-ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಕೆಪಿಟಿಸಿಎಲ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವಂತೆ ಒಟ್ಟು 491 ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಗೊಂಡಿದ್ದು, ಈ ಪೈಕಿ 448 ಅಭ್ಯರ್ಥಿಗಳಿಗೆ ಈಗ ನೇಮಕಾತಿ ಆದೇಶಗಳನ್ನು ವಿತರಿಸಲಾಗಿದೆ. ಉಳಿದ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅವರ ಮೀಸಲಾತಿ ನೈಜತೆ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರಗಳು ಸ್ವೀಕೃತಗೊಂಡ ನಂತರ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಕೆಪಿಟಿಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ನೇಮಕಾತಿ ಕೌನ್ಸೆಲಿಂಗ್‌ನಲ್ಲಿ ರಾಜ್ಯದ ವಿವಿದೆಢೆಗಳಿಂದ ಅಭ್ಯರ್ಥಿಗಳು ಭಾಗವಹಿಸಿದ್ದರು, ಇವರುಗಳಲ್ಲಿ ಮಾಜಿ ಸೈನಿಕರು, ಶ್ರವಣದೋಷ ಅಭ್ಯರ್ಥಿಗಳು ಮತ್ತು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಭಾಗಿಯಾಗಿದ್ದರು.

ಅಕ್ಟೋಬರ್ 14, 2024ರ ಉದ್ಯೋಗ ಪ್ರಕಟಣೆ ಪ್ರಕಾರ ಈ ನೇಮಕಾತಿಯನ್ನು ಹತ್ತನೇ ತರಗತಿ ಅಂಕಗಳ ಜೇಷ್ಠತೆ ಹಾಗೂ ಮೇ ತಿಂಗಳಲ್ಲಿ ನಡೆಸಿದ ಸಹನ ಶಕ್ತಿ ಪರೀಕ್ಷೆಯ ಅರ್ಹತೆಯ ಆಧಾರದ ಮೇಲೆ ಆಗಸ್ಟ್ ತಿಂಗಳಿನಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಲಾಯಿತು. ರಾಜ್ಯದಾದ್ಯಂತ 70,000 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago