ರಾಜ್ಯ

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು.

ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಯಿತು. ಕವಿಪ್ರನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನೇತೃತ್ವದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಂಡು, 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನಿಗಮದ ಉನ್ನತಾಧಿಕಾರಿಗಳು ವಿತರಿಸಿದರು.

ಎರಡು ದಿನಗಳ ಕಾಲ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಂತ್ರಾಂಶವನ್ನು ನಿಗಮದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಧಿಕಾರಿಗಳು ಅಭಿವೃದ್ದಿ ಪಡಿಸಿದ್ದರು.

ಇದನ್ನೂ ಓದಿ:-ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಕೆಪಿಟಿಸಿಎಲ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವಂತೆ ಒಟ್ಟು 491 ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಗೊಂಡಿದ್ದು, ಈ ಪೈಕಿ 448 ಅಭ್ಯರ್ಥಿಗಳಿಗೆ ಈಗ ನೇಮಕಾತಿ ಆದೇಶಗಳನ್ನು ವಿತರಿಸಲಾಗಿದೆ. ಉಳಿದ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅವರ ಮೀಸಲಾತಿ ನೈಜತೆ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರಗಳು ಸ್ವೀಕೃತಗೊಂಡ ನಂತರ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಕೆಪಿಟಿಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ನೇಮಕಾತಿ ಕೌನ್ಸೆಲಿಂಗ್‌ನಲ್ಲಿ ರಾಜ್ಯದ ವಿವಿದೆಢೆಗಳಿಂದ ಅಭ್ಯರ್ಥಿಗಳು ಭಾಗವಹಿಸಿದ್ದರು, ಇವರುಗಳಲ್ಲಿ ಮಾಜಿ ಸೈನಿಕರು, ಶ್ರವಣದೋಷ ಅಭ್ಯರ್ಥಿಗಳು ಮತ್ತು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಭಾಗಿಯಾಗಿದ್ದರು.

ಅಕ್ಟೋಬರ್ 14, 2024ರ ಉದ್ಯೋಗ ಪ್ರಕಟಣೆ ಪ್ರಕಾರ ಈ ನೇಮಕಾತಿಯನ್ನು ಹತ್ತನೇ ತರಗತಿ ಅಂಕಗಳ ಜೇಷ್ಠತೆ ಹಾಗೂ ಮೇ ತಿಂಗಳಲ್ಲಿ ನಡೆಸಿದ ಸಹನ ಶಕ್ತಿ ಪರೀಕ್ಷೆಯ ಅರ್ಹತೆಯ ಆಧಾರದ ಮೇಲೆ ಆಗಸ್ಟ್ ತಿಂಗಳಿನಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಲಾಯಿತು. ರಾಜ್ಯದಾದ್ಯಂತ 70,000 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago