ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮೇಕೆದಾಟು ಯೋಜನೆಗೆ ಸಹಕರಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ರಾಜ್ಯ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ ಕುಮಾರಸ್ವಾಮಿ ಅವರು ಮೇಕೆದಾಟುಗೆ ಚಾಲನೆ ಕೊಡಿಸಿದ್ದೆ ಆದಲ್ಲಿ ಒಬ್ಬ ಕಾಂಗ್ರೆಸ್ಸಿಗನಾಗಿ ನಾನೇ ನಿಮಗೆ ಕೈಮುಗಿದು ಧನ್ಯವಾದ ಹೇಳುತ್ತೇನೆ. ನೀವು ಮೇಕೆದಾಟು ಯೋಜನೆಗೆ ಚಾಲನೆ ಕೊಡಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಇನ್ನು ಡಿಸೆಂಬರ್ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಎಚ್ಡಿಕೆ ಹೇಳಿಕೆಗೆ, ನೀವು ಕೇಂದ್ರದ ಮಂತ್ರಿಯಾಗಿರುವುದು ರಾಜ್ಯ ಸರ್ಕಾರ ಬೀಳಿಸುವುದಕ್ಕಾ? ಈವರೆಗೆ ಮಂತ್ರಿಯಾಗಿ ರಾಜ್ಯಕ್ಕೆ ನಿಮ್ಮ ಕೊಡುಗೆಯೇನು? ರಾಜ್ಯ ಸರ್ಕಾರ ಬೀಳಿಸಲು ಮತ್ತು ಎತ್ತಲು ರಾಜ್ಯದ ಜನರಿದ್ದಾರೆ, ನೀವು ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಸ್ವಲ್ಪ ಹೇಳಿ. ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಬೀಳಿಸುವುದಾ ನೀವು ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಕೊಡುವುದು ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಹೇಗಾದರೂ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿಲು ಕುತಂತ್ರ ಮಾಡುತ್ತಿದೆ. ಕೇಂದ್ರದಿಂದ ಕರ್ನಾಟಕಕ್ಕಾಗಿರುವ ಅನ್ಯಾಯವನ್ನು ಮುಚ್ಚಿಹಾಕಲು ಈ ಎರಡು ಮೈತ್ರಿ ಪಕ್ಷಗಳು ಗಿಮಿಕ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…