ಬೆಳಗಾವಿ: ಸಿಎಂ ಸಿದ್ದರಾಮಯ್ಯರವರ ಪರವಾಗಿ ಕಂದಾಯ ಸಚಿವ ಕೃಷ ಬೈರೇಗೌಡ ಅವರು ಇಂದು ಸುವರ್ಣಸೌಧದಲ್ಲಿ 2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೇ ವಿಧೇಯಕವನ್ನು ಮಂಡಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ನಡೆದ ಅಧೀವೇಶನದಲ್ಲಿ ತೆರಿಗೆ ಪಾವತಿದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಇರುವ ಗೊಂದಲಗಳನ್ನು ನಿವಾರಿಸಿ, ಒನ್ಟೈಮ್ ಸೆಟಲ್ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ 2ನೇ ತಿದ್ದುಪಡಿ ತರುವ ಮೂಲಕ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಈ ಕುರಿತು ಇಂದು(ಡಿಸೆಂಬರ್.16) ವಿಧೇಯಕ ಮಂಡಿಸಿದ ಕೃಷ್ಣ ಬೈರೇಗೌಡ ಮಾತನಾಡಿ, ತೆರಿಗೆ ಪಾವತಿದಾರರು ಮತ್ತು ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವೆ ಗೊಂದಲಕ್ಕೆ ತೆರೆ ಎಳೆಯುವ ಮೂಲಕ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕ್ಕೆ 2ನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ತಿದ್ದುಪಡಿಯ ಪ್ರಮುಖ ಉದ್ದೇಶವೆಂದರೆ ಎಲ್ಲೆಲಲ್ಲಿ ತೆರಿಗೆದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಗೊಂದಲಗಳಿರುವ ಬಗ್ಗೆ ತೆರೆ ಎಳೆದು ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದಾಗಿದೆ. ಅಲ್ಲದೇ ಹಿಂದಿನಿಂದಲೂ ಮದ್ಯ ಮಾಡಲು ಉಪಯೋಗುವ ಸ್ಪಿರಿಟ್ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಧ್ಯೆ ತಕರಾರರು ಇದೆ. ಅದರೆ ಇದೀಗ ಸ್ಪರಿಟ್ ರಾಜ್ಯ ಸರ್ಕಾರಕ್ಕರ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್ಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…
ಮೈಸೂರು : ಮಹಾರಾಷ್ಟ್ರದ ಕಾರ್ಜತ್ನಲ್ಲಿ ಇತ್ತೀಚೆಗೆ ನಡೆದ ಹೂಫ್ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್ಶಿಪ್ನಲ್ಲಿ ಮೈಸೂರಿನ ಚಾಮುಂಡಿ…